ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 MARCH 2024
SORABA : ಬ್ಯಾಂಕಿನಿಂದ ಬಿಡಿಸಿಕೊಂಡು ಬಂದಿದ್ದ 1.30 ಲಕ್ಷ ರೂ. ಹಣ ಕಳ್ಳತನವಾಗಿದೆ. ಸೊರಬ ತಾಲೂಕು ಆನವಟ್ಟಿಯಲ್ಲಿ ಗ್ಯಾರೇಜ್ ಒಂದರ ಮುಂದೆ ಘಟನೆ ಸಂಭವಿಸಿದೆ.
ಸಮನವಳ್ಳಿಯ ನಾಗರಾಜ್ ಎಂಬುವವರು ಕೆನರಾ ಬ್ಯಾಂಕ್ನಿಂದ 1.30 ಲಕ್ಷ ರೂ. ಹಣ ಬಿಡಿಸಿಕೊಂಡಿದ್ದರು. ಅದನ್ನು ಕವರ್ ಒಂದರಲ್ಲಿ ಹಾಕಿ ಬೈಕ್ನ ಹ್ಯಾಂಡಲ್ಗೆ ಸಿಕ್ಕಿಸಿದ್ದರು. ಬ್ಯಾಂಕ್ ಪಕ್ಕದ ಗ್ಯಾರೇಜ್ ಮುಂದೆ ಬೈಕ್ ನಿಲ್ಲಿಸಿ ಗ್ಯಾರೇಜಿನವರ ಜೊತೆಗೆ ಮಾತನಾಡುತ್ತಿದ್ದರು. ಬೈಕ್ ಕಡೆಗೆ ತಿರುಗಿ ನೋಡಿದಾಗ ಹ್ಯಾಂಡಲ್ಗೆ ಸಿಕ್ಕಿಸಿದ್ದ ಕವರ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ನಾಗರಾಜ್, ಬಳಿಕ ದೂರು ನೀಡಿದ್ದಾರೆ. ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಗ್ನಿಶಾಮಕ ಅಧಿಕಾರಿ
LATEST NEWS
- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

About The Editor
ನಿತಿನ್ ಆರ್.ಕೈದೊಟ್ಲು
















