ಪ್ರಸಿದ್ಧ ರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ, ಮಿನಿಸ್ಟರ್‌ ಏನೆಲ್ಲ ಹೇಳಿದರು?

Published On : ಮಾರ್ಚ್ 31, 2026

Published By : ನಿತಿನ್‌ ಆರ್‌.ಕೈದೊಟ್ಲು 

ಸೊರಬ: ಪಟ್ಟಣದ ಆರಾಧ್ಯ ದೈವ ರಂಗನಾಥ ಸ್ವಾಮಿಯ ನೂತನ ರಥವನ್ನು (chariot) ಸಚಿವ ಮಧು ಬಂಗಾರಪ್ಪ ಅವರು ಸೋಮವಾರ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು ಪ್ರಮುಖ ವಿಷಯಗಳನ್ನು ತಿಳಿಸಿದರು.

ಸಚಿವ ಮಧು ಬಂಗಾರಪ್ಪ ಏನೇನು ಹೇಳಿದರು?

1 ಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನವು ತಾಲೂಕಿಗೆ ಕೀರ್ತಿ ಶಿಖಕರ. ದೇವರ ನೂತನ ರಥ ನಿರ್ಮಾಣಗೊಂಡಿರುವುದರಿಂದ ದಶಕಗಳ ಕನಸು ಈಡೇರಿದೆ. ಈ ಮಹತ್ವದ ಕಾರ್ಯದ ಯಶಸ್ಸಿಗೆ ಸಹಕಾರ ನೀಡಿದ ಪ್ರತಿಯೊಬ್ಬ ದಾನಿಗಳಿಗೆ ಕ್ಷೇತ್ರದ ಪರವಾಗಿ ಕೃತಜ್ಞತೆ.

Madhu-Bangarappa-inaugurates-Soraba-Ranganatha-Swamy-ratha
2 ಸಾಂಸ್ಕೃತಿಕವಾಗಿ ಶ್ರೀಮಂತಿಕೆ ಹೊಂದಿರುವ ತಾಲೂಕಿನಲ್ಲಿ ಪುರಾಣ ಪ್ರಸಿದ್ಧ ದೇವಸ್ಥಾನಗಳು ಕ್ಷೇತ್ರದ ಮಹಿಮೆಯನ್ನು ರಾಜ್ಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿವೆ. ತಾವು ಶಾಸಕರಾಗಿ ಆಯ್ಕೆಯಾದ ದಿನದಿಂದಲೂ ಪುರೋಹಿತರಾದ ನಾರಾಯಣ ಭಟ್ ಅವರು, ಹೊಸ ರಥ ನಿರ್ಮಾಣ ಮಾಡಲು ಮನವಿ ಮಾಡಿದ್ದರು. ನಮ್ಮ ಸರ್ಕಾರದ ಸಹಕಾರ ಸೇರಿದಂತೆ ಅನೇಕರ ಶ್ರಮದಿಂದ ಇಂದು ಸಮರ್ಪಣೆ ಆಗಿರುವುದು ಸಂತೋಷ.

ಇದನ್ನೂ ಓದಿ : ಸಿಡಿಲು ಬಡಿದು ಅಂಗಡಿಗೆ ಬೆಂಕಿ, ವ್ಯಾಪಾರಿ ಸಾವು, ಎಲ್ಲಿ?

3 ರಥವನ್ನು ಸುರಕ್ಷಿತವಾಗಿಡಲು ತೇರು ಮನೆ ನಿರ್ಮಾಣಕ್ಕೆ ಈಗಾಗಲೇ ₹10 ಲಕ್ಷ ಮಂಜೂರಾಗಿದೆ. ಅಧಿಕಾರಿಗಳು ₹30 ಲಕ್ಷ ಹೆಚ್ಚುವರಿ ಅನುದಾನದಲ್ಲಿ ಸುಂದರವಾದ ತೇರು ಮನೆ ನಿರ್ಮಿಸಬೇಕು.

Madhu-Bangarappa-inaugurates-Soraba-Ranganatha-Swamy-ratha

ರಂಗನಾಥ ಸ್ವಾಮಿ ದೇಗುಲದ ಪ್ರಧಾನ ಅರ್ಚಕ ಘನಪಾಠಿ ನಾರಾಯಣ ಭಟ್, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ತಹಸೀಲ್ದಾರ್ ಪುರಂದರ, ತಾ.ಪಂ ಇಒ ಕೆ.ಜಿ.ಶಶಿಧರ್, ರಥ ಸಮರ್ಪಣಾ ಸಮಿತಿ ಅಧ್ಯಕ್ಷ ಹೆಚ್.ಗಣಪತಿ, ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ.ಶೇಖರ್, ಪ್ರಶಾಂತ್ ಮೇಸ್ತ್ರಿ, ಡಾಕಪ್ಪ, ಬಂದಗಿ ಬಸವರಾಜ್ ಶೇಟ್, ತಬಲಿ ಬಂಗಾರಪ್ಪ ಇತರಿದ್ದರು.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 31, 2026

Leave a Comment