ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 MARCH 2023
SORABA : ಕೊರಳಲ್ಲಿರುವ ಚಿನ್ನದ ಸರವನ್ನು ಫಳಫಳ ಹೊಳೆಯುವಂತೆ ಮಾಡಿಕೊಡುವುದಾಗಿ ನಂಬಿಸಿ ವೃದ್ಧೆಯೊಬ್ಬರನ್ನು ವಂಚಿಸಲಾಗಿದೆ. ಸೊರಬ ಪಟ್ಟಣದ ಕೆಇಬಿ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ರಾಧಮ್ಮ ಎಂಬುವವರ ಚಿನ್ನಾಭರಣವನ್ನು (ornaments) ಕಳ್ಳತನ ಮಾಡಲಾಗಿದೆ.
ಹೇಗಾಯ್ತು ಘಟನೆ?
ರಾಧಮ್ಮ ಎಂಬುವವರ ಮನೆ ಬಳಿ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಚಿನ್ನಾಭರಣಕ್ಕೆ ಪಾಲಿಶ್ ಮಾಡಿಕೊಡುವುದಾಗಿ ನಂಬಿಸಿದ್ದಾರೆ. ಕೊರಳಲ್ಲಿದ್ದ 20 ಗ್ರಾಂ ತೂಕದ ಬಂಗಾರದ ಚೈನ್, 40 ಗ್ರಾಂ ತೂಕದ ಲಕ್ಷ್ಮಿ ತಾಳಿಸರ ಮತ್ತು ಚೈನ್ ಬಿಚ್ಚಿಸಿಕೊಂಡಿದ್ದಾರೆ. ಕುಕ್ಕರ್, ನೀರು ಮತ್ತು ಅರಿಶಿಣ ತರುವಂತೆ ರಾಧಮ್ಮ ಅವರಿಗೆ ಅಪರಿಚಿತರು ತಿಳಿಸಿದರು.

ರಾಧಮ್ಮ ಅವರು ಸ್ಟೀಲ್ ಡಬ್ಬಿ ತಂದು ಕೊಟ್ಟಿದ್ದು, ಅದರೊಳಗೆ ಚಿನ್ನದ ಸರಗಳನ್ನು ಹಾಕುವಂತೆ ನಟಿಸಿ, ಇದನ್ನು ಸ್ವಲ್ಪ ಹೊತ್ತು ಬಿಸಿ ಮಾಡಿ ಎಂದು ಅಪರಿಚಿತರು ತಿಳಿಸಿದರು. ರಾಧಮ್ಮ ಅವರು ಮನೆಯೊಳಗೆ ಹೋಗುತ್ತಿದ್ದಂತೆ ಇಬ್ಬರು ಅಪರಿಚಿತರು ತಾವು ತಂದಿದ್ದ ಬೈಕಿನಲ್ಲಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅನುಮಾನಗೊಂಡು ಸ್ಟೀಲ್ ಡಬ್ಬಿಯ ಮುಚ್ಚಳ ತೆಗೆದು ನೋಡಿದಾಗ ಸರಗಳು ಇರಲಿಲ್ಲ.
ಪಕ್ಕದ ಮನೆಗೂ ಹೋಗಿದ್ದರು
ವಂಚಕರು ರಾಧಮ್ಮ ಅವರ ಪಕ್ಕದ ಮನೆಗೂ ತೆರಳಿದ್ದರು. ಆದರೆ ಅವರು ಪಾಲಿಶ್ ಬೇಕಿಲ್ಲ ಎಂದು ಅವರನ್ನು ಸಾಗಹಾಕಿದ್ದರು. ಘಟನೆ ಕುರಿತು ರಾಧಮ್ಮ ಅವರು ಸೊರಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನೂ ಓದಿ – ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಮತ್ತೆ ಪೌಡರ್ ಗ್ಯಾಂಗ್ ಪ್ರತ್ಯಕ್ಷ, ಮಹಿಳೆಗೆ ವಂಚನೆ
ಹೋಂಡಾ ಶೈನ್ ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ತಮ್ಮನ್ನು ವಂಚಿಸಿ 2.10 ಲಕ್ಷ ರೂ. ಮೌಲ್ಯದ ಬಂಗಾರದ ಆಭರಣಗಳನ್ನು (ornaments) ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
LATEST NEWS
- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP












