SHIVAMOGGA LIVE NEWS | 19 JULY 2024
SORABA : ಮೀನು ಹಿಡಿಯಲು ಕೆರೆಗೆ ಇಳಿದಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದಾರೆ (Missing). ಆತನಿಗಾಗಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
![]() |
ಸೊರಬ ತಾಲೂಕು ಯಡಗೊಪ್ಪ ಗ್ರಾಮದ ಕೆರೆಯಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಉದ್ರಿ ಗ್ರಾಮದ ಯಲ್ಲಪ್ಪ (50) ನಾಪತ್ತೆಯಾಗಿದ್ದಾರೆ. ಭಾರಿ ಮಳೆಯಿಂದಾಗಿ ಕೆರೆ ಭರ್ತಿಯಾಗಿ ಕೋಡಿ ಬಿದ್ದಿತ್ತು. ಇದರಿಂದ ನೀರು ರಭಸವಾಗಿ ಹರಿಯುತ್ತಿತ್ತು. ಮೀನು ಹಿಡಿಯಲು ಬಲೆ ಹಾಕಿದ್ದ ಯಲ್ಲಪ್ಪ ಅವರು ಕೆರೆಗೆ ಇಳಿದಿದ್ದರು. ಈ ಸಂದರ್ಭ ನಾಪತ್ತೆಯಾಗಿದ್ದಾರೆ.
ಯಲ್ಲಪ್ಪ ಅವರ ಸಹೋದರ, ಮಕ್ಕಳು ಕೆರೆ ಬಳಿ ಇದ್ದರು ಎನ್ನಲಾಗಿದೆ. ಆದರೆ ನೀರಿನ ರಭಸಕ್ಕೆ ಯಲ್ಲಪ್ಪ ಅವರ ರಕ್ಷಣೆ ಸಾಧ್ಯವಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಜೋರು ಮಳೆಯಿಂದಾಗಿ ಜಿಲ್ಲೆಯಲ್ಲಿ ಹಳ್ಳ – ಕೊಳ್ಳಗಳು, ಕೆರೆ, ಹೊಳೆಗಳಿಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಈ ಸಂದರ್ಭ ಹತ್ಮೀನು ಮತ್ತು ಮೀನು ಹಿಡಿಯಲು ಜನ ಕೆರೆ, ನದಿಗಳಿಗೆ ಇಳಿಯುತ್ತಿದ್ದಾರೆ. ಇದರಿಂದ ಅವಘಡಗಳು ಸಂಭವಿಸುತ್ತಿವೆ. ಈ ಹಿನ್ನೆಲೆ ಕೆರೆ, ನದಿಗಳಿಗೆ ಇಳಿಯದಂತೆ ಎಚ್ಚರ ವಹಿಸುವಂತೆ ಪೊಲೀಸರು ಸೂಚಿಸಿದ್ದಾರೆ.
ಇದನ್ನೂ ಓದಿ ⇓
ಶಿವಮೊಗ್ಗ, ಭದ್ರಾವತಿಯಲ್ಲಿ ಲೋಕಾಯುಕ್ತ ದಾಳಿ, ಕೋಟಿ ಕೋಟಿಯ ಮನೆ, ಚಿನ್ನಾಭರಣ ಪತ್ತೆ, ಇಲ್ಲಿದೆ ಪಟ್ಟಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200