ಕೆರೆ ಏರಿ ಮೇಲೆ ಕಸ ಸುರಿದವರಿಂದಲೇ ಕಸ ತೆಗೆಸಿದ ಪೊಲೀಸರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SORABA NEWS | 23 ಆಗಸ್ಟ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೆರೆ ದಂಡೆ ಮೇಲೆ ಕಸ ಸುರಿದು ಹೋಗುತ್ತಿದ್ದವರಿಂದಲೇ ಪೊಲೀಸರು ಕಸ ತೆಗಿಸಿದ್ದಾರೆ. ಅಲ್ಲದೆ ಇದು ಪುನರಾವರ್ತನೆಯಾದರೆ ಹತ್ತು ಸಾವಿರ ರೂ. ದಂಡ ವಿಧಿಸುವುದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ.

ಸೊರಬ ತಾಲೂಕು ಆನವಟ್ಟಿಯ ಕುಬಟೂರಿನ ದೊಡ್ಡಕೆರೆ ಮತ್ತು ಆನವಟ್ಟಿ ತಾವರೆಕೆರೆ ದಂಡೆ ಮೇಲೆ ಕೆಲವು ಅಂಗಡಿ ಮಾಲೀಕರು, ಸಾರ್ವಜನಿಕರು ನಿತ್ಯ ಕಸ ಸುರಿಯುತ್ತಿದ್ದರು. ಭಾನುವಾರ ಕೆಲವರು ಕೆರೆ ಏರಿ ಮೇಲೆ ಕಸ ಸುರಿದು ಹೋಗುತ್ತಿದ್ದರು. ಇವರನ್ನು ತಡೆದ ಆನವಟ್ಟಿ ಪೊಲೀಸರು ಸುರಿದವರಿಂದಲೇ ಕಸ ತೆಗೆಸಿದ್ದಾರೆ.

ಆನವಟ್ಟಿ ಪಿಎಸ್ಐ ಪ್ರವೀಣ್ ಕುಮಾರ್ ಮತ್ತು ಸಿಬ್ಬಂದಿಯ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತವಾಗಿದೆ.

ಸ್ವಚ್ಛತೆಗೆ ಮುಂದಾಗಿದ್ದ ಪಟ್ಟಣ ಪಂಚಾಯಿತಿ

AVvXsEjqI8PPMNmhmzTK72s6aHdyGOwaxgBbnPaxEgdNmEiwLVxu2qPFWOl6pNSi5TkLjb7eVIwUDa7oTDLioeFYHsTaIvxkbizculAS6mYiPjBUAXSI3yUj FPfEWxml8DJztTgufNzviEAb8 E9X6L8I0JOYK4raqr

ಅವಳಿ ಕೆರೆ ಮಧ್ಯೆ ರಾಜ್ಯ ಹೆದ್ದಾರಿ ಹಾದು ಹೋಗುತ್ತದೆ. ಇಲ್ಲಿರುವ ಅಂಗಡಿ ಮಾಲೀಕರು ಕೆರೆ ಏರಿ ಮೇಲೆ ರೆಸ್ತೆಯ ಪಕ್ಕದಲ್ಲಿ ಕಸ ಸುರಿಯುತ್ತಿದ್ದರು. ಇದರಿಂದ ಕೆರೆಗೆ ಹಾನಿಯಾಗುತ್ತಿರುವ ಕುರಿತು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದರು. ಮಾಧ್ಯಮಗಳಲ್ಲೂ ವರದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಸ್ವಚ್ಛತಾ ಕಾರ್ಯ ಆರಂಭಿಸಲಾಗಿತ್ತು. ಹೀಗಿದ್ದೂ ಕೆಲವರು ಕೆಸ ಸುರಿಯುವ ಪರಿಪಾಠ ಮುಂದುವರೆಸಿದ್ದರು.

ಕಸ ಸುರಿದು ಹೋಗುತ್ತಿದ್ದವರಿಗೆ ಪಾಠ ಕಲಿಸುವ ಸಲುವಾಗಿ ಪೊಲೀಸರು ಕಸ ಎತ್ತಿಸಿದ್ದಾರೆ. ಮುಂದೆ ದಂಡ ಹಾಕು ಎಚ್ಚರಿಕೆಯನ್ನೂ ನೀಡಿದ್ದಾರೆ.ಇನ್ನು, ಕೆರೆಗಳ ದಂಡೆ ಮೇಲೆ ಪೂರ್ಣ ಸ್ವಚ್ಛತೆ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

238274473 1178430235970218 2635873810325074933 n.jpg? nc cat=106&ccb=1 5& nc sid=730e14& nc ohc=RmV6nLXI3JwAX9gwRnl& nc ht=scontent.fblr1 3

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment