ಆನವಟ್ಟಿ: ವಿದ್ಯುತ್ ಗ್ರಿಡ್ನಲ್ಲಿ (power grid) ಶಾರ್ಟ್ ಸರ್ಕಿಟ್ ಉಂಟಾಗಿ, ಪಕ್ಕದ ಜಮೀನಿನಲ್ಲಿ ಒಕ್ಕಲು ಮಾಡಿದ್ದ ನಾಲ್ಕು ಎಕರೆ ಜೋಳ ಸುಟ್ಟು ಕರಕಲಾಗಿದೆ. ಸೊರಬ ತಾಲೂಕು ಅನವಟ್ಟಿ ಸಮೀಪದ ಕೋಟಿಪುರ ಗ್ರಾಮದಲ್ಲಿರುವ ಘಟನೆ ಸಂಭವಿಸಿದೆ.
ಗ್ರಾಮಸ್ಥರೆಲ್ಲ ಸೇರಿ ಬೆಂಕಿ ಆರಿಸಲು ಪ್ರಯತ್ನಿಸಿದರು. ಆದರೆ ಜೋಳ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಕೋಟಿಪುರ ತಾಂಡಾದ ಕೃಷಿಕ ಪೀರ್ಯಾನಾಯ್ಕ ಎಂಬುವವರಿಗೆ ಸೇರಿದ ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಜೋಳ ಬೆಂಕಿಗೆ ಅಹುತಿಯಾಗಿದೆ. ಮೆಸ್ಕಾಂ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ » ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್ಪ್ರೆಸ್ಗೆ ಬದಲಿ ಮಾರ್ಗ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
