ಮಾಜಿ ಸಿಎಂ ಬಂಗಾರಪ್ಪ ಹೆಸರಿಡುವಂತೆ ಆಗ್ರಹ, ಸೊರಬದಲ್ಲಿ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SORABA NEWS | 14 ಜುಲೈ 2021

ಶಿವಮೊಗ್ಗದ ನಿರ್ಮಿಸಲಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯ ಮಂತ್ರಿ ಎಸ್.ಬಂಗಾರಪ್ಪ ಹೆಸರು ನಾಮಕಾರಣ ಮಾಡುವಂತೆ ಆಗ್ರಹಿಸಿ ಶ್ರೀ ನಾರಾಯಣಗುರು ವಿಚಾರ ವೇದಿಕೆ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಈ ಸಂಬಂಧ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಶಿವಾನಂದ ರಾಣಿ ಅವರಿಗೆ ಮನವಿ ಸಲ್ಲಿಸಿದರು.

ಇದೆ ವೇಳೆ ಮಾತನಾಡಿದ ವೇದಿಕೆಯ ಜಿಲ್ಲಾಧ್ಯಕ್ಷ ಪ್ರವೀಣ್ ಹಿರೇ ಇಡಗೋಡು, ಎಸ್.ಬಂಗಾರಪ್ಪ ಅವರು ಶೋಷಿತರು, ಹಿಂದುಳಿದ ವರ್ಗಗಳ ನಾಯಕರಾಗಿದ್ದರು. ಬಗರ್‌ಹುಕುಂ ಸಾಗುವಳಿ ದಾರರಿಗೆ ಜಮೀನು ಕೊಡಿಸಲು ಸಾಕಷ್ಟು ಶ್ರಮಿಸಿದ್ದರು. ರೈತರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ನೀಡಿ ರೈತಪರ ನಾಯಕ ಎನಿಸಿಕೊಂಡಿದ್ದರು. ಗ್ರಾಮೀಣ ಕೃಪಾಂಕ ಜಾರಿಗೆ ತರುವ ಮೂಲಕ ಗ್ರಾಮಾಂತರ ಯುವಕರು ಸರ್ಕಾರಿ ಉದ್ಯೋಗ ಪಡೆಯಲು ಸಹಕಾರಿಯಾಗಿದ್ದರು. ಹೀಗಾಗಿ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವುದು ಸೂಕ್ತ ಎಂದು ಒತ್ತಾಯಿಸಿದರು.

ವಿಚಾರ ವೇದಿಕೆಯ ತಾಲೂಕು ಅಧ್ಯಕ್ಷ ಶಿವಕುಮಾರ, ಮುಖಂಡರಾದ ನಿಂಗಪ್ಪ, ಲಿಂಗರಾಜ, ಟೇಕರಾಜ, ಈಶ್ವರಪ್ಪ, ಚೇತನ್, ಸದಾಶಿವ, ಪ್ರಮುಖರಾದ ಕೆ. ಧರ್ಮಪ್ಪ, ಶಶಿಕುಮಾರ, ಎಚ್‌.ಕೆರಿಯಪ್ಪ, ಎಚ್.ಮೋಹನ, ಸೋಮಶೇಖರ ಇತರರಿದ್ದರು.

217389951 1153288501817725 4096501658035425233 n.jpg? nc cat=102&ccb=1 3& nc sid=730e14& nc ohc=NI8ByLd 2YQAX eTTxq&tn=XgSJ3kUX1No5RJvs& nc ht=scontent.fblr1 6

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment