ಶಿವಮೊಗ್ಗ ಲೈವ್.ಕಾಂ | SORABA NEWS | 28 FEBRUARY 2021
ಮೂಗೂರು ಏತ ನೀರಾವರಿ ಯೋಜನೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರಲು ಶಾಸಕ ಕುಮಾರ್ ಬಂಗಾರಪ್ಪ ನಿರ್ಧರಿಸಿ, ಅಚ್ಚರಿ ಮೂಡಿಸಿದ್ದರು. ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ತಂಡ ಕುಮಾರ್ ಬಂಗಾರಪ್ಪ ಅವರ ಮನೆಗೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವೊಲಿಸಿದರು.
ಮನೆಗೆ ದೌಡಾಯಿಸಿದ ರಾಘವೇಂದ್ರ
ಸಂಸದ ಬಿ.ವೈ.ರಾಘವೇಂದ್ರ, ಮೆಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಶಾಸಕ ಕುಮಾರ್ ಬಂಗಾರಪ್ಪ ಅವರ ಮನೆಗೆ ಇವತ್ತು ಬೆಳಗ್ಗೆ ದೌಡಾಯಿಸಿದರು. ಅವರ ಮನವೊಲಿಸಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಿದರು. ಬಳಿಕ ಎಲ್ಲರೂ ಒಟ್ಟಿಗೆ ಮನೆಯಿಂದ ಹೊರಬಂದು, ಕಾರ್ಯಕ್ರಮದ ಸ್ಥಳಕ್ಕೆ ತೆರಳಿದರು.
ಬಳಿಕ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಯಾವುದೆ ಅಸಮಾಧಾನವಿಲ್ಲ. ಶಿವಮೊಗ್ಗದಲ್ಲಿ ನಡೆಯುವ ನಮ್ಮೊಲುಮೆ ಕಾರ್ಯಕ್ರಮಕ್ಕೆ ಶಾಸಕರ ಕುಮಾರ್ ಬಂಗಾರಪ್ಪ ಅವರನ್ನು ಆಹ್ವಾನಿಸಲು ಮನೆಗೆ ಬಂದಿದ್ದೇವೆ ಎಂದು ತಿಳಿಸಿದರು.
ಶಾಸಕರ ಅಸಮಾಧಾನಕ್ಕೆ ಕಾರಣವೇನು?
ಮೂಗೂರು ಏತ ನೀರಾವರಿ ಯೋಜನೆಯ ಕುರಿತು ಫ್ಲೆಕ್ಸ್ಗಳಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಅವರ ಫೋಟೊ ಬಳಕೆ ಮಾಡಿಲ್ಲ ಎಂದು ಹೇಳಲಾಗಿದೆ. ಈ ನಡುವೆ ನೀರಾವರಿ ನಿಗಮದವರು ತಯಾರಿಸಿರುವ ಕಿರು ಚಿತ್ರದಲ್ಲಿಯೂ ಶಾಸಕರನ್ನು ಕಡೆಗಣಿಸಾಗಿದೆ. ಇದು ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.
ಸಿಎಂ ಭೇಟಿ ಮೊದಲು ಮುಸುಕಿನ ಗುದ್ದಾಟ
ಸೊರಬ ಬಿಜೆಪಿಯಲ್ಲಿಯಲ್ಲಿನ ಮೂಲ ಮತ್ತು ವಲಸಿಗರ ನಡುವಿನ ಮುಸುಕಿನ ಗುದ್ದಾಟದಿಂದಾಗಿಯೇ ಶಾಸಕರನ್ನು ಕಡೆಗಣಿಸಲಾಗಿದೆ ಎಂದು ಹೇಳಲಾಗುತ್ತಿದೆ. ಮೂಲ ಬಿಜೆಪಿಯವರು ಶಾಸಕ ಕುಮಾರ್ ಬಂಗಾರಪ್ಪ ಅವರನ್ನು ದೂರವಿಟ್ಟು ಫ್ಲೆಕ್ಸ್ ಪ್ರಟಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200