ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SORABA, 5 AUGUST 2024 : 22 ವರ್ಷ ಭಾರತೀಯ ಸೇನೆಯಲ್ಲಿ ಯೋಧರಾಗಿ (Soldier) ಕರ್ತವ್ಯ ನಿರ್ವಹಿಸಿ ನಿವೃತ್ತಿಯಾದ ಸೊರಬ ತಾಲೂಕು ಹೆಸರಿ ಗ್ರಾಮದ ಯೋಧ ಶಿವಮೂರ್ತಿ ಅವರನ್ನು ಗ್ರಾಮಸ್ಥರು ಭಾನುವಾರ ಅದ್ದೂರಿಯಾಗಿ ಸ್ವಾಗತಿಸಿದರು.
ಯೋಧ ಶಿವಮೂರ್ತಿ ಆಗಮನದ ಹಿನ್ನೆಲೆ ಗ್ರಾಮಸ್ಥರು ಗ್ರಾಮವನ್ನು ತಳಿರು, ತೋರಣಗಳಿಂದ ಸಿಂಗರಿಸಿದ್ದರು. ಶಿವಮೂರ್ತಿ ಅವರು ಭಾನುವಾರ ಸಂಜೆ ಗ್ರಾಮಕ್ಕೆ ಬರುತ್ತಿದ್ದಂತೆ ಆರತಿ ಬೆಳಗಿ, ಸಿಡಿಮದ್ದು ಸಿಡಿಸಿ ಸಂಭ್ರಮಪಟ್ಟರು. ಶಿವಮೂರ್ತಿ ಅವರಿಂದ ಕೇಕ್ ಕತ್ತರಿಸಿ ಪರಿಸ್ಪರ ಹಂಚಿ ಖುಷಿ ಪಟ್ಟರು.
ಎಲ್ಲೆಲ್ಲಿ ಸೇವೆ ಸಲ್ಲಿಸಿದ್ದರು?
ಶಿವಮೂರ್ತಿ ಅವರು ಜಮ್ಮು – ಕಾಶ್ಮೀರ, ದಿಲ್ಲಿ, ಪಶ್ಚಿಮ ಬಂಗಾಳ, ಪಂಜಾಬ್, ಗುಜರಾತ್ ಸೇರಿದಂತೆ ವಿವಿಧೆಡೆ ಸೇವೆ ಸಲ್ಲಿಸಿದ್ದರು. ಅನೇಕ ಪ್ರಮುಖ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ್ದರು. ಶಿವಮೂರ್ತಿ ಅವರನ್ನು ಗ್ರಾಮದಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು.

ದೇಶ ಸೇವೆ ನನಗೆ ತೃಪ್ತಿ ತಂದಿದೆ. ಯುವ ಜನರು ದೇಶಪ್ರೇಮ ಬೆಳೆಸಿಕೊಳ್ಳಬೇಕು. 22 ವರ್ಷದ ಸುದೀರ್ಘ ಅನುಭವವನ್ನು ಶಾಲೆ, ಕಾಲೇಜುಗಳಲ್ಲಿ ಹಂಚಿಕೊಳ್ಳುತ್ತೇನೆ. ಇದರಿಂದ ಮಕ್ಕಳಿಗೆ ಸೇನೆಗೆ ಸೇರುವ ಪ್ರೇರಣೆ ದೊರೆಯಲಿದೆ. ದೇಶಾಭಿಮಾನ, ಶಿಸ್ತು ಮೈಗೂಡಿಸಿಕೊಳ್ಳಲು ಅನುಕೂಲ ಆಗಲಿದೆ. ಶಿವಮೂರ್ತಿ, ನಿವೃತ್ತ ಯೋಧ
ಇಂಡುವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೇದಮೂರ್ತಿ, ಶಿವಮೂರ್ತಿ ಅವರ ಪತ್ನಿ ಅನುಪಮಾ, ಮಕ್ಕಳಾದ ಮೌಲ್ಯ, ವೃತಿಕ್, ತಾಯಿ ನಿಂಗಮ್ಮ, ಗ್ರಾಮ ಸಲಹಾ ಸಮಿತಿ ಅಧ್ಯಕ್ಷ ರಮೇಶ, ಗ್ರಾಮ ಪಂಚಾಯಿತಿ ಸದಸ್ಯ ಯೋಗೇಶ್, ಉಮೇಶ್, ರಾಜಪ್ಪ, ನೇಮಪ್ಪ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ ⇓
ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಬಿದರೆವರೆಗೆ ಕಾರು ಬೆನ್ನಟ್ಟಿ ಹೋಗಿ ಯುವಕರಿಂದ ಚಾಲಕನಿಗೆ ಮನಸೋಯಿಚ್ಛೆ ಥಳಿತ
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು





