ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | TEMPLE | 26 ಮೇ 2022
ಸೊರಬ ತಾಲೂಕು ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆಸಲಾಯಿತು. 22.71 ಲಕ್ಷ ರೂ. ಕಾಣಿಕೆ ಹಣ ಸಂಗ್ರಹವಾಗಿದೆ.
ತಾಲೂಕು ದಂಡಾಧಿಕಾರಿ ಮಂಜುಳಾ ಹೆಗಡಾಳ್ ಅವರ ಸಮ್ಮುಖದಲ್ಲಿ ಹುಂಡಿ ಹಣ ಎಣಿಕೆ ಮಾಡಲಾಯಿತು. 22,71,900 ರೂ. ಕಾಣಿಕೆ ಹಣ ಸಂಗ್ರಹವಾಗಿದೆ. ಎಣಿಕೆ ಕಾರ್ಯ ನಡೆಯುತ್ತಿದ್ದ ಕೊಠಡಿ ಸುತ್ತಲು ಸಿಸಿಟಿವಿ ಅಳವಡಿಸಲಾಗಿತ್ತು.
ಮಾರ್ಚ್ ತಿಂಗಳಲ್ಲಿ ಚಂದ್ರಗುತ್ತಿ ದೇಗುಲದ ಹುಂಡಿ ಎಣಿಕೆ ಮಾಡಿದಾಗ 24.54 ಲಕ್ಷ ರೂ. ಸಂಗ್ರಹವಾಗಿತ್ತು. ಕೇವಲ ಎರಡು ತಿಂಗಳ ಅಂತರದಲ್ಲಿ ಹುಂಡಿಯಲ್ಲಿ ಗರಿಷ್ಠ ಮೊತ್ತದ ಕಾಣಿಕೆ ಸಂಗ್ರಹವಾಗಿದೆ.
ತಹಶೀಲ್ದಾರ್ ಯು.ವೆಂಕಟೇಶ್, ರಾಜಸ್ವ ನಿರೀಕ್ಷಕ ವಿ.ಎಲ್.ಶಿವಪ್ರಸಾದ್, ದೇವಸ್ಥಾನದ ಅಡಳಿತ ಕಾರ್ಯನಿರ್ವಹಣಾಧಿಕಾರಿ ಎನ್.ಆರ್.ರಂಗಪ್ಪ, ಶಿರಸ್ತೇದಾರ್ ನಿರ್ಮಾ, ಮುಜರಾಯಿ ಇಲಾಖೆಯ ಎಂ.ಶೃತಿ, ರತ್ನಾಕರ ಶಾನುಭೋಗ, ಗ್ರಾಮ ಲೆಕ್ಕಿಗರು ಮತ್ತು ದೇವಸ್ಥಾನದ ಸಿಬ್ಬಂದಿ ಇದ್ದರು.
ಇದನ್ನೂ ಓದಿ – ಸಿಗಂದೂರು ಲಾಂಚ್ ನೌಕರ ಹೃದಯಾಘಾತದಿಂದ ಸಾವು, ಕಂಬನಿ ಮಿಡಿದ ಜನ, ಶಾಸಕರು
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್

- ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

- ₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

- ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















