ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 JUNE 2024
SORABA : ಲೋಕಸಭೆ ಚುನಾವಣೆಯಲ್ಲಿ ನಾಲ್ಕನೆ ಬಾರಿ ಗೆಲುವು ಸಾಧಿಸಿರುವ ಬಿ.ವೈ.ರಾಘವೇಂದ್ರ ಕೇಂದ್ರ ಸಚಿವರಾಗಲಿ (Minister) ಎಂದು ಪೂಜೆ ಸಲ್ಲಿಸಲಾಗಿದೆ. ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದೇಗುಲದಲ್ಲಿ ಸೊರಬ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ.
ಬಿ.ವೈ.ರಾಘವೇಂದ್ರ ಅವರಿಗೆ ನರೇಂದ್ರ ಮೋದಿ ಅವರ ಸಂಪುಟದಲ್ಲಿ ವಿಮಾನಯಾನ ಅಥವಾ ರೈಲ್ವೆ ಖಾತೆ ದೊರೆಯಲಿ ಎಂದು ಪೂಜೆ ಸಲ್ಲಿಸಲಾಯಿತು. ಯುವ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮಾವಿನಬಳ್ಳಿಕೊಪ್ಪ, ಜಿಲ್ಲಾ ಕಾರ್ಯದರ್ಶಿ ಆಶೀಕ್ ನಾಗಪ್ಪ, ಗೋ ಸಂರಕ್ಷಣ ಹೋರಾಟ ಸಮಿತಿ ಅಧ್ಯಕ್ಷ ಚಿದಾನಂದಗೌಡ, ಪ್ರಮುಖರಾದ ಗುರುಮೂರ್ತಿ ದೇವತಿಕೊಪ್ಪ, ಹರೀಶ್ ವಿದ್ಯುತ್ ನಗರ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಎರಡು ರೈಲುಗಳು ಜೂನ್ 6 ಮತ್ತು 13ರಂದು ಸಂಚಾರ ನಿರ್ಬಂಧ, ಕಾರಣವೇನು?
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





