
ಸಾಗರ: ಆಲಳ್ಳಿ–ಶಿರೂರು ಗ್ರಾಮದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ (Restaurant) ಆರಂಭಿಸುತ್ತಿರುವುದನ್ನು ವಿರೋಧಿಸಿ ಗ್ರಾಮಸ್ಥರು ಸಮಾಲೋಚನಾ ಸಭೆ ನಡೆಸಿದರು.
ಈ ಭಾಗದಲ್ಲಿ ಕೂಲಿ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದ ಸಮುದಾಯಕ್ಕೆ ಸೇರಿರುವವರೇ ಹೆಚ್ಚಿದ್ದಾರೆ. ಇಲ್ಲಿ ಹೊಸದಾಗಿ ಬಾರ್ ತೆರೆದರೆ ಬಡವರು ಮದ್ಯದ ವ್ಯಸನಕ್ಕೆ ದಾಸರಾಗುವ ಸಾಧ್ಯತೆ ಹೆಚ್ಚಿದೆ. ಸ್ಥಳೀಯರ ವಿರೋಧದ ನಡುವೆಯೂ ಬಾರ್ ಆರಂಭಕ್ಕೆ ಸಂಬಂಧಪಟ್ಟ ಇಲಾಖೆ ಒಪ್ಪಿಗೆ ನೀಡಿದರೆ ಸುತ್ತಮುತ್ತಲ ಗ್ರಾಮಸ್ಥರು ನಿರಂತರ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.
ಪ್ರಮುಖರಾದ ಅಶೋಕ್ ಬರದವಳ್ಳಿ, ಹೆಚ್.ಎನ್.ದಿವಾಕರ್, ಸುರೇಶ್, ಶಾಂತಕುಮಾರ್, ಹುಚ್ಚಪ್ಪ ಮಂಡಗಳಲೆ, ಅಣ್ಣಪ್ಪ ಬರದವಳ್ಳಿ, ಕೃಷ್ಣಮೂರ್ತಿ ಇದ್ದರು.
ಇದನ್ನೂ ಓದಿ » ರಾತ್ರಿ ಯುವಕನ ಕೊಲೆ, ಮತ್ತೊಬ್ಬನಿಗೆ ಗಾಯ, ಇಬ್ಬರು ವಶಕ್ಕೆ, ಘಟನೆ ಕಾರಣವಾಯ್ತ ಕ್ರಿಕೆಟ್?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200