SHIVAMOGGA LIVE NEWS | Wild Animal | 10 ಏಪ್ರಿಲ್ 2022
ಕಟ್ಟಿಗೆ ತರಲು ಕಾಡಿಗೆ ಹೋದ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದೆ. ಆದರೆ ಸಾಕು ನಾಯಿಗಳು ಚಿರತೆ ಮೇಲೆ ದಾಳಿ ನಡೆಸಿ ಮಾಲೀಕನನ್ನು ಕಾಪಾಡಿವೆ.
![]() |
ಸೊರಬ ತಾಲೂಕು ಆನವಟ್ಟಿ ಸಮೀಪದ ಎಣ್ಣೆಕೊಪ್ಪ ಗೊಲ್ಲರ ತಾಂಡಾದಲ್ಲಿ ಘಟನೆ ನಡೆದಿದೆ. ಬಂಗಾರಪ್ಪ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿದೆ.
ಬಂಗಾರಪ್ಪ ಅವರು ಕಟ್ಟಿಗೆ ತರಲು ಕಾಡಿಗೆ ಹೋಗಿದ್ದರು. ಈ ವೇಳೆ ಚಿರತೆ ದಾಳಿ ನಡೆಸಿದೆ. ದಾಳಿ ವೇಳೆ ಬಂಗಾರಪ್ಪ ಅವರ ಕೈ, ಕಾಲುಗಳಿಗೆ ಗಂಭೀರ ಗಾಯವಾಗಿದೆ. ಇನ್ನು, ಬಂಗಾರಪ್ಪ ಅವರ ಮೇಲೆ ದಾಳಿ ನಡೆಸಿದ ಚಿರತೆ ಮೇಲೆ ಸಾಕು ನಾಯಿಗಳು ದಾಳಿ ನಡೆಸಿವೆ.
ಬಂಗಾರಪ್ಪ ಅವರ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಮೇಲೆ ಸಾಕು ನಾಯಿಗಳು ದಾಳಿ ನಡೆಸಿದವು. ಚಿರತೆಯನ್ನು ಓಡಿಸಿ ಬಂಗಾರಪ್ಪ ಅವರ ಪ್ರಾಣ ರಕ್ಷಣೆ ಮಾಡಿದವು. ಬಂಗಾರಪ್ಪ ಅವರನ್ನು ಶಿಕಾರಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
wild animal
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200