SHIVAMOGGA LIVE NEWS | 19 DECEMBER 2023
THIRTHAHALLI : ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ಎಳ್ಳಮಾವಾಸ್ಯೆ ಜಾತ್ರೆಗೆ ದಿನಾಂಕ ನಿಗದಿಯಾಗಿ. ಜನವರಿ 11, 12 ಮತ್ತು 13ರಂದು ಜಾತ್ರೆ ನಡೆಯಲಿದೆ. ಜಾತ್ರೆಯನ್ನು ಅದ್ಧೂರಿಯಾಗಿ ಆಚರಿಸು ಸಲುವಾಗಿ ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಶಾಸಕ ಆರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಜನಪ್ರತಿನಿಧಿಗಳ ಸಭೆ ನಡೆಸಲಾಯಿತು.
ಏನೇನೆಲ್ಲ ಚರ್ಚೆಯಾಯ್ತು?
ದೊಡ್ಡ ಸಂಖ್ಯೆಯ ಭಕ್ತರು ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಪಟ್ಟಣ ಪಂಚಾಯಿತಿ ಮತ್ತು ತಾಲೂಕು ಆಡಳಿತ ಸಂಪೂರ್ಣ ಹೊಣೆ ಹೊತ್ತು ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು.
ರಾಮಕೊಂಡ ಸಂಪರ್ಕಿಸಲು ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಕಿರು ಸೇತುವೆಗೆ ಪಟ್ಟಣ ಪಂಚಾಯಿತಿಯಿಂದ 6 ಲಕ್ಷ ರೂ. ವ್ಯಯ ಮಾಡಲಾಗುತ್ತಿದೆ. ಹೆಚ್ಚಿನ ಸಹಕಾರ ನೀಡಲು ಹಣ ಇಲ್ಲ ಎಂದು ಮುಖ್ಯಾಧಿಕಾರಿ ಕುರಿಯಕೊಸ್ ಉತ್ತರಿಸಿದರು.
ಜಾತ್ರೆ ಸಮಯದಲ್ಲಿ ಪಟ್ಟಣ ಪಂಚಾಯಿತಿಗೆ ಹೆಚ್ಚಿನ ಆದಾಯ ಲಭಿಸುತ್ತದೆ. ಆದ್ದರಿಂದ ರಾಷ್ಟ್ರೀಯ ಹಬ್ಬಗಳ ಆಚರಣೆಗೆ ಮೀಸಲಿಟ್ಟ ಹಣವನ್ನು ಜಾತ್ರೆಗೆ ನೀಡಬೇಕು. ರಾಮೇಶ್ವರ ದೇವಸ್ಥಾನದ ಮುಂಭಾಗದಲ್ಲಿ ವಾಸ್ತು ಪ್ರಕಾರ ಮೆಟ್ಟಿಲು ಮಾಡಬೇಕು.
ತಹಶೀಲ್ದಾರ್ ಜಕ್ಕನ ಗೌಡರ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗೀತಾ ರಮೇಶ್, ಉಪಾಧ್ಯಕ್ಷ ರಹಮತ್ ಉಲ್ಲಾ ಅಸಾದಿ, ಎಳ್ಳಮವಾಸ್ಯೆ ಜಾತ್ರಾ ಸಮಿತಿ ಸಂಚಾಲಕ ಸೊಪ್ಪುಗುಡ್ಡೆ ರಾಘವೇಂದ್ರ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ಸೈಕಲ್ನಲ್ಲಿ ಆಗಮಿಸಿದ ಅಪ್ಪು ಅಭಿಮಾನಿ, ಗಿನ್ನಿಸ್ ದಾಖಲೆಯ ಗುರಿ, ಏನಿದು ಸೈಕಲ್ ಯಾತ್ರೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200