ಶಿವಮೊಗ್ಗ LIVE
ತೀರ್ಥಹಳ್ಳಿ: ಮಾಳೂರು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬೈಕ್ ಮತ್ತು ಬಸ್ಸಿನ ನಡುವೆ ಅಪಘಾತ (Accident) ಸಂಭವಿಸಿದ್ದು ಶಿವಮೊಗ್ಗದ ವಿದ್ಯಾನಗರದ ವ್ಯಕ್ತಿ ಸೇರಿ ಮೂವರು ಗಾಯಗೊಂಡಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ₹1.20 ಲಕ್ಷ ಮೌಲ್ಯದ ಅಡಿಕೆ ಕಳ್ಳತನ, ಎಲ್ಲಿ? ಹೇಗಾಯ್ತು ಘಟನೆ?
ವಿದ್ಯಾನಗರದ ಪುಟ್ಟಮರಪ್ಪ, ಮಂಜುನಾಥ್ ಮತ್ತು ಡಿ.ಮಂಜುನಾಥ್ ಗಾಯಗೊಂಡವರು. ಸಕ್ರೇಬೈಲಿಗೆ ಊಟಕ್ಕೆ ಹೋಗಿ ಮೂವರು ಮಾಳೂರಿನ ತನಕ ಹೋಗಿ ಅಲ್ಲಿಂದ ಶಿವಮೊಗ್ಗಕ್ಕೆ ವಾಪಸ್ ಬರುತ್ತಿದ್ದಾಗ ಘಟನೆ ನಡೆದಿದೆ.
ಸ್ಪ್ಲೆಂಡರ್ ಬೈಕ್ನಲ್ಲಿ ಮೂವರು ಬರುತ್ತಿದ್ದಾಗ ಮಾಳೂರಿನ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ತಿರುವಿನಲ್ಲಿ ಅಪಘಾತವಾಗಿದೆ. ಶಿವಮೊಗ್ಗ ಕಡೆಯಿಂದ ಬಂದ ಖಾಸಗಿ ಬಸ್ ಅತಿ ವೇಗವಾಗಿ ಬಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಬೈಕ್ನಲ್ಲಿದ್ದ ಮೂವರೂ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ ಮತ್ತು ಬೈಕ್ನ ಮುಂಭಾಗ ಜಖಂ ಆಗಿದೆ ಎಂದು ಆರೋಪಿಸಲಾಗಿದೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






