ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 20 ಜನವರಿ 2022
ನಟ ಜಗ್ಗೇಶ್ ಅಭಿನಯದ ರಾಘವೇಂದ್ರ ಸ್ಟೋರ್ಸ್ ಸಿನಿಮಾದ ಚಿತ್ರೀಕರಣ ತೀರ್ಥಹಳ್ಳಿಯಲ್ಲಿ ನಡೆಯುತ್ತಿದೆ. ಬಿಡುವಿನ ವೇಳೆಯಲ್ಲಿ ನಟ ಜಗ್ಗೇಶ್ ಅವರು ಕುಪ್ಪಳಿಯ ಕವಿಮನೆಗೆ ಭೇಟಿ ನೀಡಿದ್ದರು. ಮನೆ ಮುಂದೆ ಫೋಟೊ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಕಳೆದ ಕಲವು ದಿನದಿಂದ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ನಟ ಜಗ್ಗೇಶ್ ಅವರು ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.
ಕವಿಮನೆಗೆ ಭೇಟಿ ನೀಡಿದ ಜಗ್ಗೇಶ್
ನಟ ಜಗ್ಗೇಶ್ ಅವರು ಕುಪ್ಪಳಿಯಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಕುಪ್ಪಳಿಯ ಪರಿಸರ, ಕವಿಮನೆ ಕುರಿತು ಮಾಹಿತಿ ಪಡೆದುಕೊಂಡರು. ಕವಿಮನೆಯಲ್ಲಿ ಕುವೆಂಪು ಅವರಿಗೆ ಸೇರಿದ ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಅವುಗಳನ್ನು ಕಣ್ತುಂಬಿಕೊಂಡು ಖುಷಿ ಪಟ್ಟರು.
ಫೋಟೊ ಕ್ಲಿಕ್ಕಿಸಿಕೊಂಡು ಖುಷಿ
ಇನ್ನು, ಕುವೆಂಪು ಅವರ ಕವಿಮನೆ ಮುಂದೆ ನಟ ಜಗ್ಗೇಶ್ ಅವರು ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಅಲ್ಲದೆ ಕುಪ್ಪಳಿ, ಕವಿಮನೆ, ಅಲ್ಲಿಯ ಪರಿಸರದ ಕುರಿತು ತಮ್ಮ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದು ಪ್ರಕಟಿಸಿದ್ದಾರೆ.
ನಟ ಜಗ್ಗೇಶ್ ಅವರ ಫೇಸ್ ಬುಕ್ ಪೋಸ್ಟ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





