SHIVAMOGGA LIVE NEWS | 17 ಮಾರ್ಚ್ 2022
ಮರು ಡಾಂಬರೀಕರಣದ ಬಳಿಕ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಪುನಾರಂಭವಾಗಿದೆ. ಬುಧವಾರದಿಂದ ಘಾಟಿಯಲ್ಲಿ ವಾಹನಗಳು ಎಂದಿನಂತೆ ಸಂಚರಿಸುತ್ತಿವೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಮರು ಡಾಂಬರೀಕರಣ ಹಿನ್ನೆಲೆ ಮಾರ್ಚ್ 5 ರಿಂದ ಮಾರ್ಚ್ 15ರವರೆಗೆ ಘಾಟಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು.
18 ಕಿ.ಮೀ ರಸ್ತೆಗೆ 5.34 ಕೋಟಿ ರೂ. ವೆಚ್ಚದಲ್ಲಿ ಮರು ಡಾಂಬರೀಕರಣ ನಡೆಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಶೃಂಗೇರಿ ಉಪ ವಿಭಾಗದ ತಾಂತ್ರಿಕ ವಿಭಾಗದ ಮುಖ್ಯ ನಿರ್ವಹಣೆ ಅಡಿ ತೀರ್ಥಹಳ್ಳಿಯ ನ್ಯಾಷನಲ್ ನಿರ್ಮಾಣ ಸಂಸ್ಥೆ ಕಾಮಗಾರಿ ನಡೆಸಿದೆ.
ಆಗುಂಬೆಯಿಂದ ಹೆಬ್ರಿವರೆಗಿನ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದವು. ಇದರಿಂದ ವಾಹನ ಸಂಚಾರಕ್ಕೆ ತೀವ್ರ ಆಡಚಣೆ ಉಂಟಾಗಿತ್ತು. ಮರು ಡಾಂಬರೀಕರಣದಿಂದಾಗಿ ವಾಹನ ಸಂಚಾರ ಸುಗಮವಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200