ಆಗುಂಬೆ ಬಳಿ ಕುಂದಾದ್ರಿ ಬೆಟ್ಟಕ್ಕೆ ಬರುವ ಪ್ರವಾಸಿಗರೆ ಗಮನಿಸಿ, ಇನ್ಮುಂದೆ ಇಲ್ಲಿ ಕಸ ಹಾಕುವಂತಿಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 08 JANUARY 2021

ಇತಿಹಾಸ ಪ್ರಸಿದ್ಧ ಜೈನ ಆರಾಧನಾ ಕ್ಷೇತ್ರ ಕುಂದಾದ್ರಿ ಬೆಟ್ಟದಲ್ಲಿ ಸ್ಥಳೀಯರು, ಅರಣ್ಯ ಇಲಾಖೆ ಸಿಬ್ಬಂದಿಗಳು ಶ್ರಮದಾನ ಮಾಡಿ, ಸ್ವಚ್ಛತೆ ಮಾಡಿದ್ದಾರೆ. ಎಲ್ಲೆಂದರಲ್ಲಿ ಬಿದ್ದಿದ್ದ ಕಸ, ಪ್ಲಾಸ್ಟಿಕ್ ವಸ್ತುಗಳು, ಬಾಟಲಿಗಳನ್ನು ತೆರವು ಮಾಡಲಾಗಿದೆ.

ಯಾರೆಲ್ಲ ಶ್ರಮದಾನದಲ್ಲಿ ಇದ್ದರು?

ಅರಣ್ಯ ಇಲಾಖೆಯ ಮೇಗರವಳ್ಳಿ ವಲಯದ ಸಿಬ್ಬಂದಿಗಳು, ಆಗುಂಬೆ ವಲಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಗಳು, ಗುಡ್ಡೇಕೇರಿ ಗ್ರಾಮದ ಹಿಂಗಾರ ಪೌಂಡೇಶನ್, ವಿಕಾಸ ಮಂಚ್ ಮತ್ತು ಆಗುಂಬೆ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ, ಹೊನ್ನೆತಾಳು ಹಿರಿಯ ಪ್ರಾಥಮಿಕ ಶಾಲೆ, ಗುಡ್ಡೇಕೇರಿ ಸರ್ಕಾರಿ ಪ್ರೌಢಶಾಲೆ ಹಾಗೂ ವಿವಿಧ ಸಂಘಗಳ ಪದಾಧಿಕಾರಿಗಳು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

ಶ್ರಮದಾನಕ್ಕೆ ಕಾರಣವೇನು?

ಕುಂದಾದ್ರಿ ಬೆಟ್ಟವು ಕುಂದಾ ಮಹಾಮುನಿಯ ತಪೋಭೂಮಿ. ಜೈನರ ಪಾಲಿಗೆ ಇದು ಅತ್ಯಂತ ಪ್ರಮುಖ ಆರಾಧನಾ ಕೇಂದ್ರಗಳಲ್ಲಿ ಒಂದು. ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದು. ಇಲ್ಲಿಗೆ ಬರುವ ಪ್ರವಾಸಿಗರು ಎಲ್ಲೆಂದರಲ್ಲಿ ಕಸ, ಪ್ಲಾಸ್ಟಿಕ್ ವಸ್ತುಗಳನ್ನು ಸುರಿದು ಹೋಗುತ್ತಿದ್ದರು. ಇದರಿಂದ ಧಾರ್ಮಿಕ ಶ್ರದ್ಧಾ ಕೇಂದ್ರದ ವಾತಾವರಣವು ಹಾಳಾಗಿತ್ತು.

ಕುಂದಾದ್ರಿ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿ ಉಳಿಯಬೇಕು ಎಂಬ ಉದ್ದೇಶದಿಂದ ಸ್ಥಳೀಯರು ಸ್ವಚ್ಛತಾ ಕಾರ್ಯ ನಡೆಸಿದರು. ಸುಮಾರು 80 ಸ್ವಯಂ ಸೇವರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು. ಇನ್ಮುಂದೆ ಇಲ್ಲಿಗೆ ಬರುವ ಪ್ರವಾಸಿಗರು ಎಲ್ಲೆಂದರಲ್ಲಿ ಕಸ ಹಾಕುವಂತಿಲ್ಲ. ಒಂದು ವೇಳೆ ಹಾಗೆ ಮಾಡಿದರೆ ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗೋದು ನಿಶ್ಚಿತ.

ಆಗುಂಬೆ ವಲಯ ಅರಣ್ಯಾಧಿಕಾರಿ ಉಮಾ ಮತ್ತು ಸಿಬ್ಬಂದಿಗಳು, ಆಗುಂಬೆ ವಲಯ ಮೇಲ್ವಿಚಾರಕ ರವೀಂದ್ರ, ಸೇವಾ ಪ್ರತಿನಿಧಿಗಳಾದ ಸುಮನಾ, ನೇತ್ರಾವತಿ ಶೈಲಜಾ, ಶಕುಂತಲಾ, ಒಕ್ಕೂಟಗಳ ಅಧ್ಯಕ್ಷರಾದ ದೇವದಾಸ್ ಗಾರ್ಡರ್ ಗದ್ದೆ, ದಿನೇಶ್ ಕೆಂದಾಳಬೈಲು, ಸತೀಶ್ ಗುಡ್ಡೇಕೇರಿ, ನಿತ್ಯಾನಂದ ಕೆಂದಾಳಬೈಲು, ಪಂಚಾಯತಿ ಸದಸ್ಯರುಗಳಾದ ಕುಂದಾ ರಾಘವೇಂದ್ರ, ಶಕೀಲಾ ಮಂಜುನಾಥ್ ಬಿಳಗಿರಿ ಮತ್ತಿತರರು ಪಾಲ್ಗೊಂಡಿದ್ದರು.

135533134 1305047486523335 3464174020789068633 n.jpg? nc cat=102&ccb=2& nc sid=8bfeb9& nc ohc=ujY xXrOxUoAX UCrHN& nc ht=scontent.fblr4 1

137330642 1305047519856665 6707561540862327529 n.jpg? nc cat=101&ccb=2& nc sid=8bfeb9& nc ohc=9KbZO EOmPMAX9RBWeP& nc ht=scontent.fblr4 1

135580143 1305047436523340 3444116466528666330 n.jpg? nc cat=106&ccb=2& nc sid=8bfeb9& nc ohc=QrXkmXYQWMwAX v9t6P& nc ht=scontent.fblr4 3

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 8, 2021

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

Leave a Comment