ಆಗುಂಬೆ ಬಳಿ ಕುಂದಾದ್ರಿ ಬೆಟ್ಟಕ್ಕೆ ಬರುವ ಪ್ರವಾಸಿಗರೆ ಗಮನಿಸಿ, ಇನ್ಮುಂದೆ ಇಲ್ಲಿ ಕಸ ಹಾಕುವಂತಿಲ್ಲ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
➤ ಸುದ್ದಿಯ ಮುಂದಿನ 9 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 08 JANUARY 2021

ಇತಿಹಾಸ ಪ್ರಸಿದ್ಧ ಜೈನ ಆರಾಧನಾ ಕ್ಷೇತ್ರ ಕುಂದಾದ್ರಿ ಬೆಟ್ಟದಲ್ಲಿ ಸ್ಥಳೀಯರು, ಅರಣ್ಯ ಇಲಾಖೆ ಸಿಬ್ಬಂದಿಗಳು ಶ್ರಮದಾನ ಮಾಡಿ, ಸ್ವಚ್ಛತೆ ಮಾಡಿದ್ದಾರೆ. ಎಲ್ಲೆಂದರಲ್ಲಿ ಬಿದ್ದಿದ್ದ ಕಸ, ಪ್ಲಾಸ್ಟಿಕ್ ವಸ್ತುಗಳು, ಬಾಟಲಿಗಳನ್ನು ತೆರವು ಮಾಡಲಾಗಿದೆ.

ಯಾರೆಲ್ಲ ಶ್ರಮದಾನದಲ್ಲಿ ಇದ್ದರು?

ಅರಣ್ಯ ಇಲಾಖೆಯ ಮೇಗರವಳ್ಳಿ ವಲಯದ ಸಿಬ್ಬಂದಿಗಳು, ಆಗುಂಬೆ ವಲಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಗಳು, ಗುಡ್ಡೇಕೇರಿ ಗ್ರಾಮದ ಹಿಂಗಾರ ಪೌಂಡೇಶನ್, ವಿಕಾಸ ಮಂಚ್ ಮತ್ತು ಆಗುಂಬೆ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ, ಹೊನ್ನೆತಾಳು ಹಿರಿಯ ಪ್ರಾಥಮಿಕ ಶಾಲೆ, ಗುಡ್ಡೇಕೇರಿ ಸರ್ಕಾರಿ ಪ್ರೌಢಶಾಲೆ ಹಾಗೂ ವಿವಿಧ ಸಂಘಗಳ ಪದಾಧಿಕಾರಿಗಳು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

ಶ್ರಮದಾನಕ್ಕೆ ಕಾರಣವೇನು?

ಕುಂದಾದ್ರಿ ಬೆಟ್ಟವು ಕುಂದಾ ಮಹಾಮುನಿಯ ತಪೋಭೂಮಿ. ಜೈನರ ಪಾಲಿಗೆ ಇದು ಅತ್ಯಂತ ಪ್ರಮುಖ ಆರಾಧನಾ ಕೇಂದ್ರಗಳಲ್ಲಿ ಒಂದು. ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದು. ಇಲ್ಲಿಗೆ ಬರುವ ಪ್ರವಾಸಿಗರು ಎಲ್ಲೆಂದರಲ್ಲಿ ಕಸ, ಪ್ಲಾಸ್ಟಿಕ್ ವಸ್ತುಗಳನ್ನು ಸುರಿದು ಹೋಗುತ್ತಿದ್ದರು. ಇದರಿಂದ ಧಾರ್ಮಿಕ ಶ್ರದ್ಧಾ ಕೇಂದ್ರದ ವಾತಾವರಣವು ಹಾಳಾಗಿತ್ತು.

ಕುಂದಾದ್ರಿ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿ ಉಳಿಯಬೇಕು ಎಂಬ ಉದ್ದೇಶದಿಂದ ಸ್ಥಳೀಯರು ಸ್ವಚ್ಛತಾ ಕಾರ್ಯ ನಡೆಸಿದರು. ಸುಮಾರು 80 ಸ್ವಯಂ ಸೇವರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು. ಇನ್ಮುಂದೆ ಇಲ್ಲಿಗೆ ಬರುವ ಪ್ರವಾಸಿಗರು ಎಲ್ಲೆಂದರಲ್ಲಿ ಕಸ ಹಾಕುವಂತಿಲ್ಲ. ಒಂದು ವೇಳೆ ಹಾಗೆ ಮಾಡಿದರೆ ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗೋದು ನಿಶ್ಚಿತ.

ಆಗುಂಬೆ ವಲಯ ಅರಣ್ಯಾಧಿಕಾರಿ ಉಮಾ ಮತ್ತು ಸಿಬ್ಬಂದಿಗಳು, ಆಗುಂಬೆ ವಲಯ ಮೇಲ್ವಿಚಾರಕ ರವೀಂದ್ರ, ಸೇವಾ ಪ್ರತಿನಿಧಿಗಳಾದ ಸುಮನಾ, ನೇತ್ರಾವತಿ ಶೈಲಜಾ, ಶಕುಂತಲಾ, ಒಕ್ಕೂಟಗಳ ಅಧ್ಯಕ್ಷರಾದ ದೇವದಾಸ್ ಗಾರ್ಡರ್ ಗದ್ದೆ, ದಿನೇಶ್ ಕೆಂದಾಳಬೈಲು, ಸತೀಶ್ ಗುಡ್ಡೇಕೇರಿ, ನಿತ್ಯಾನಂದ ಕೆಂದಾಳಬೈಲು, ಪಂಚಾಯತಿ ಸದಸ್ಯರುಗಳಾದ ಕುಂದಾ ರಾಘವೇಂದ್ರ, ಶಕೀಲಾ ಮಂಜುನಾಥ್ ಬಿಳಗಿರಿ ಮತ್ತಿತರರು ಪಾಲ್ಗೊಂಡಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Comment