ಶಿವಮೊಗ್ಗ ಲೈವ್.ಕಾಂ | 23 ಫೆಬ್ರವರಿ 2019
ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದ ಸ್ಥಳದಲ್ಲಿ ಶಾಶ್ವತ ದುರಸ್ಥಿ ಕಾರ್ಯ ಕೈಗೊಳ್ಳಲುವ ಹಿನ್ನೆಲೆ, ಒಂದು ತಿಂಗಳು ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ.
ಮಾರ್ಚ್ 1 ರಿಂದ 31ರವರೆಗೆ ದುರಸ್ಥಿ ಕಾರ್ಯ ನಡೆಸಲಿದೆ. ಈ ಅವಧಿಯಲ್ಲಿ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಬೇಕು ಎಂದು ಸೂಚಿಸಲಾಗಿದೆ.
ಎಲ್ಲೆಲ್ಲಿ ದುರಸ್ಥಿ ಕಾರ್ಯ ನಡೆಯಲಿದೆ?
ಭಾರೀ ಮಳೆಗೆ ಜುಲೈ ತಿಂಗಳಲ್ಲಿ ಆಗುಂಬೆ ಘಾಟಿಯ 7ನೇ ಮತ್ತು 14ನೇ ತಿರುವು ಮತ್ತು ಆನೆಗುಡ್ಡದ ಬಳಿ ಗುಡ್ಡ ಕುಸಿತವಾಗಿತ್ತು. ಇದರಿಂದ ತೀವ್ರ ಆತಂಕ ಸೃಷ್ಟಿಯಾಗಿತ್ತು. ಎಂಟು ತಿಂಗಳ ಬಳಿಕ ಹೆದ್ದಾರಿ ಪ್ರಾಧಿಕಾರ ಶಾಶ್ವತ ದುರಸ್ಥಿಗೆ ಮುಂದಾಗಿದೆ.
ಪರ್ಯಾಯ ಮಾರ್ಗ ಯಾವುದು?
ಸಾಮಾನ್ಯ ಬಸ್ಸುಗಳು, ಜೀಪು, ಕಾರು, ಮಿನಿ ವ್ಯಾನ್ ಹಾಗೂ ದ್ವಿಚಕ್ರ ವಾಹನಗಳು ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದ ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ, ಮಾಳಾಘಾಟಿ, ಕಾರ್ಕಳ ಹಾಗೂ ಉಡುಪಿ ಮೂಲಕ ಸಂಚರಿಸಬೇಕು.
ರಾಜಹಂಸ, ಐರಾವತ ಮತ್ತು ಖಾಸಗಿ ಬಸ್, ಬುಲೆಟ್ ಟ್ಯಾಂಕರ್, ಶಿಫ್ಟ್ ಕಾರ್ಗೊ ಕಂಟೈನರ್ ಹಾಗೂ ಲಾಂಗ್ ಚಾರ್ಸಿಯ ಭಾರೀ ವಾಹನಗಳು ತೀರ್ಥಹಳ್ಳಿ, ಯಡೂರು, ಮಾಸ್ತಿಕಟ್ಟೆ, ಹೊಸಂಗಡಿ, ಸಿದ್ಧಾಪುರ, ಕುಂದಾಪುರ ಮತ್ತು ಉಡುಪಿ ರಾಜ್ಯ ಹೆದ್ದಾರಿ 52ರ ಮೂಲಕ ಸಂಚರಿಸಬೇಕು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200