ಕಾರಿನಿಂದ ಹೊರಗೆಳೆದು ಎಬಿವಿಪಿ ಕಾರ್ಯಕರ್ತನ ಮೇಲೆ ಹಲ್ಲೆ, ಲಘು ಲಾಠಿ ಪ್ರಹಾರ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | THIRTHAHALLI | 5 ಜುಲೈ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತ ಮತ್ತು ಆತನ ಸ್ನೇಹಿತನ ಮೇಲೆ ಯುವಕರ ಗುಂಪೊಂದು ದಾಳಿ (ASSAULT) ಮಾಡಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.

Shimoga Nanjappa Hospital

ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ, ಎಬಿವಿಪಿ ಕಾರ್ಯಕರ್ತ ಪ್ರತೀಕ್ ಗೌಡ ಮತ್ತು ಆತನ ಸ್ನೇಹಿತ ನಿಶಾಂತ್ ಎಂಬುವವರ ಮೇಲೆ ಹಲ್ಲೆಯಾಗಿದೆ.

ಘಟನೆ ಸಂಭವಿಸಿದ್ದು ಹೇಗೆ?

ಕಾಲೇಜಿನಲ್ಲಿದ್ದ ವೇಳೆ ಜೋರು ಮಳೆಯಾಗುತ್ತಿದ್ದರಿಂದ ಪ್ರತೀಕ್ ಗೌಡ ತನ್ನ ಸ್ನೇಹಿತ ನಿಶಾಂತ್’ಗೆ ಕರೆ ಮಾಡಿದ್ದ. ಕಾರು ತರುವಂತೆ ತಿಳಿಸಿದ್ದ. ನಿಶಾಂತ್ ಕಾರು ತರುತ್ತಿದ್ದಂತೆ ಪ್ರತೀಕ್ ಗೌಡ ಕಾರಿನಲ್ಲಿ ಕುಳಿತು ತೆರಳುತ್ತಿದ್ದ. ಕಾರು ಕಾಲೇಜಿನ ಗೇಟು ದಾಟುತ್ತಿದ್ದಂತೆ ಯುವಕರ ಗುಂಪೊಂದು ಕಾರನ್ನು ಅಡ್ಡಗಟ್ಟಿದೆ.

ಪ್ರತೀಕ್ ಗೌಡನನ್ನು ಕಾರಿನಿಂದ ಹೊರಗೆಳೆದು ಹಲ್ಲೆ (ASSAULT) ನಡೆಸಲಾಗಿದೆ. ಈ ವೇಳೆ ನಿಶಾಂತ್ ಮೇಲೂ ಹಲ್ಲೆಯಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಯುವಕರ ಗುಂಪು ಪ್ರತೀಕ್ ಗೌಡ ಮತ್ತು ನಿಶಾಂತ್’ನನ್ನು ಬಿಡಲು ನಿರಾಕರಿಸಿದರು. ಆಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ದಾಳಿಕೋರರ ವಿರುದ್ಧ ದೂರು

ಘಟನೆ ಬೆನ್ನಿಗೆ ದಾಳಿಕೋರರ ವಿರುದ್ಧ ಪ್ರತೀಕ್ ಗೌಡ ದೂರು ನೀಡಿದ್ದಾರೆ. ಅಬ್ದುಲ್ ವಾಜಿದ್, ನಿಹಾರ್, ನಿಹಾನ್, ಹ್ಯಾರಿಸ್, ಸದಾಫ್ ಸಾವಿದ್ ರಿಜ್ವಾನ್, ಜೇಶನ್, ಮಾಸೂಮ್ ಬ್ಯಾರಿ ಸೇರಿ ಹಲವರ ವಿರುದ್ಧ ದೂರು ನೀಡಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಮಾರುತಿ 800 ಕಾರಿನ ಸೀಟಿನ ಕೆಳಗಿತ್ತು 40 ಬಾಕ್ಸ್, ಕೂಡಲೆ ಚಾಲಕ ಅರೆಸ್ಟ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment