ತೀರ್ಥಹಳ್ಳಿ ಭಾರತಿಪುರದ ಮೇಲ್ಸೇತುವೆ ಬಹುತೇಕ ಪೂರ್ಣ, ಕಾಮಗಾರಿ ಪರಿಶೀಲಿಸಿದ ಶಾಸಕ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 19 JUNE 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

THIRTHAHALLI : ಭಾರತಿಪುರದಲ್ಲಿ ನಿರ್ಮಾಣವಾಗುತ್ತಿರುವ ಮೇಲ್ಸೇತುವೆ (Bridge) ಕಾಮಗಾರಿಯನ್ನು ಶಾಸಕ ಆರಗ ಜ್ಞಾನೇಂದ್ರ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್‌ ನವೀನ್‌ ರಾಜ್‌ ಅವರಿಂದ ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದರು.

ತೀರ್ಥಹಳ್ಳಿ ತಾಲೂಕು ಭಾರತಿಪುರ ತಿರುವಿನಲ್ಲಿ 56 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಈ ಹಿನ್ನೆಲೆ ಶಾಸಕ ಆರಗ ಜ್ಞಾನೇಂದ್ರ ಅವರು ಪರಿಶೀಲನೆ ನಡೆಸಿದರು.

ಕಿಸಾನ್‌ ಸಮ್ಮಾನ್‌ ಅನ್ನದಾತರ ಸಂಕಷ್ಟಕ್ಕೆ ನರವಾಗಲಿದೆ

KONANDURU : ಅನ್ನದಾತರ ಸಂಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಿಸಾನ್‌ ಸಮ್ಮಾನ್ ವಿಮಾ ಯೋಜನೆಯಲ್ಲಿ 20 ಸಾವಿರ ಕೋಟಿ ರೂ. ಬಿಡುಗಡೆ ಮಾಡುತ್ತಿದೆ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಿಸಾನ್‌ ಸಮ್ಮಾನ್‌ ಯೋಜನೆ ಅನುದಾನ ಬಿಡುಗಡೆ ಕಾರ್ಯಕ್ರಮವನ್ನು ಕೋಣಂದೂರಿನ ರೈತರ ಸಂಪರ್ಕ ಕೇಂದ್ರದಲ್ಲಿ ಟಿವಿಯಲ್ಲಿ ವೀಕ್ಷಿಸಿದ ಬಳಿಕ ಆರಗ ಜ್ಞಾನೇಂದ್ರ ಮಾತನಾಡಿದರು. ಹವಾಮಾನ ವೈಪರೀತ್ಯ ಮುಂತಾದ ಕಾರಣಗಳಿಂದ ಸಂಕಷ್ಟಕ್ಕೀಡಾಗುವ ರೈತರ ನೆರವಿಗೆ ಈ ಯೋಜನೆ ಅತ್ಯಂತ ಸಹಕಾರಿ ಎಂದರು.

ಕೋಣಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಗೋಪಿ, ಹುಂಚದಕಟ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ತಾರಾನಾಥ್, ಕಟ್ಟೆ ಮಹೇಶ್, ಬಿಜ್ಜಳ ಧರಣಿ, ಸತೀಶ್ ಶೆಟ್ಟಿ ಹಾಗೂ ಕೃಷಿ ಅಧಿಕಾರಿ ಅಜಿತ್‌ ಇದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ ಮಾಡಿದ ಟ್ರಾಫಿಕ್‌ ಪೊಲೀಸ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment