ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 4 ಡಿಸೆಂಬರ್ 2018
ವಿದ್ಯಾರ್ಥಿಯೊಬ್ಬನ ಕೊಲೆ ಹಿನ್ನೆಲೆ ತೀರ್ಥಹಳ್ಳಿಯಲ್ಲಿ ಶಾಲಾ, ಕಾಲೇಜು ಆಡಳಿತ ಮಂಡಳಿ, ಪ್ರಾಚಾರ್ಯರು, ಮುಖ್ಯ ಶಿಕ್ಷಕರು, ಪೊಲೀಸರ ಸಮಾಲೋಚನಾ ಸಭೆ ನಡೆಯಿತು. ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ತಾಲೂಕಿನಲ್ಲಿ ಕಾನೂನು ಬಿಗಿಗೊಳಿಸಬೇಕು. ಇಲ್ಲವಾದಲ್ಲಿ ಪೊಲೀಸ್ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಶಾಸಕ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದರು.
ಏನೇನು ಚರ್ಚೆಯಾಯ್ತು?
ತಾಲೂಕಿನ ಘನತೆಗೆ ಧಕ್ಕೆ ತರುವಂತಹ ಘಟನೆಗಳು ಈಚೆಗೆ ನಡೆದಿವೆ. ಇದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪಟ್ಟಣ ವ್ಯಾಪ್ತಿಯಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಈಗಿಂದೀಗಲೇ ನಿಯಂತ್ರಣ ಮಾಡಬೇಕಿದೆ. ಕಾಲೇಜು ಕ್ಯಾಂಪಸ್’ಗಳ ಒಳಗೆ ಅಪರಿಚಿತರ ಪ್ರವೇಶವನ್ನು ನಿರ್ಬಂಧಿಸೇಕು ಎಂಬುದರ ಚರ್ಚೆ ಮಾಡಲಾಯಿತು.
ಖಡಕ್ ವಾರ್ನಿಂಗ್ ನೀಡಿದ ಎಂಎಲ್ಎ
ನನ್ನ ಅಧಿಕಾರವಧಿಯಲ್ಲಿ ಅಕ್ರಮ ದಂಧೆಗಳು ನಡೆಯಬಾರದು ಎಂದು ಸೂಚನೆ ನೀಡಿದ ಶಾಸಕ ಆರಗ ಜ್ಞಾನೇಂದ್ರ, ಇವತ್ತಿಂದಲೇ ಇಸ್ಪೀಟ್ ದಂಧೆ, ಅಕ್ರಮ ಮದ್ಯ ಮಾರಾಟ ದಂಧೆಯನ್ನು ತಡೆಬೇಕು ಎಂದು ಒತ್ತಾಯಿಸಿದರು. ಯಾವುದೇ ಒತ್ತಡಕ್ಕೂ ಮಣಿಯದೆ ಕ್ರಮ ಕೈಗೊಳ್ಳಬೇಕು. ನನ್ನ ಮಾತು ಮೀರಿ ಅವಕಾಶ ನೀಡಿದರೆ, ಪೊಲೀಸ್ ಠಾಣೆ ಎದುರಿಗೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು. ಇನ್ನು, ತೀರ್ಥಹಳ್ಳಿ ಟೌನ್ ಕ್ಲಬ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನಡೆಯಬೇಕು ಅಂತಾ ತಹಶೀಲ್ದಾರ್ ಆನಂದಪ್ಪನಾಯಕ್ ಅವರಿಗೆ ಸೂಚಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು







