ತೀರ್ಥಹಳ್ಳಿ:ಆಗುಂಬೆ ಸಮೀಪದ ಕೌರಿಹಕ್ಲು ಸಮೀಪ ಕಳೆದ ರಾತ್ರಿ ಸಂಭವಿಸಿದ ಅಪಘಾತದಲ್ಲಿ (car hits) ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗುಡ್ಡೆಕೇರಿ ನಿವಾಸಿ ದಯಾನಂದ ಪ್ರಭು (60) ಎಂಬುವವರು ಮೃತಪಟ್ಟಿದ್ದಾರೆ. ರಸ್ತೆ ದಾಟುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದ್ದರೂ ಸಹ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಪೊಲೀಸರ ತ್ವರಿತ ಕಾರ್ಯಾಚರಣೆ ನಡೆಸಿ ಅಪಘಾತಕ್ಕೆ ಕಾರಣವಾದ ಕಾರನ್ನು ಪತ್ತೆ ಹಚ್ಚಿದ್ದಾರೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ