FATAFAT NEWS, 19 AUGUST 2024
ಮರ ಬಿದ್ದು ತುಂಡಾದ ವಿದ್ಯುತ್ ತಂತಿ
ಶಿವಮೊಗ್ಗ ಲೈವ್.ಕಾಂ : ಆನಂದಪುರ ಸಮೀಪದ ಇರುವಕ್ಕಿಯ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಎದುರು ಇರುವ 11 ಕೆ.ವಿ ವಿದ್ಯುತ್ ಲೈನ್ ಮೇಲೆ ಭಾನುವಾರ ದೊಡ್ಡ ಅಕೇಶಿಯಾ ಮರ ಬಿದ್ದು ತಂತಿ ತುಂಡಾಗಿದೆ. ಕಂಬ ಬಿರುಕು ಬಿಟ್ಟಿದೆ. ಆನಂದಪುರ ಸೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಮೆಸ್ಕಾಂ ಕಚೇರಿ ಇಂಜಿನಿಯರ್ ಮತ್ತು ಸಿಬ್ಬಂದಿ ತ್ವರಿತವಾಗಿ ದುರಸ್ತಿ ಮಾಡಿದರು.
![]() |
ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಅಶೋಕ ಚಕ್ರವಿಲ್ಲದ ಧ್ವಜ ಹಾರಿಸಿದ ವ್ಯಕ್ತಿ, ವಿಡಿಯೋ ವೈರಲ್, ದಾಖಲಾಯ್ತು ಕೇಸ್
ಕಲ್ಲಿದ್ದಲು ತುಂಬಿದ್ದ ಲಾರಿ ಅಪಘಾತ
ಶಿವಮೊಗ್ಗ ಲೈವ್.ಕಾಂ : ರಿಪ್ಪನ್ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಕೆರೆಹಳ್ಳಿ ಹಳ್ಳದ ಸಮೀಪ ಲಾರಿ ಅಪಘಾತವಾಗಿದೆ. ಮಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ಕಲ್ಲಿದ್ದಲು ತುಂಬಿದ ಲಾರಿಯು ಎದುರು ಬರುತ್ತಿದ್ದ ವಾಹನಕ್ಕೆ ದಾರಿಬಿಡುವ ವೇಳೆ ರಸ್ತೆ ಪಕ್ಕದ ಜಮೀನಿನಲ್ಲಿ ಇಳಿದು ಮರಕ್ಕೆ ಒರಗಿ ನಿಂತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಇದನ್ನೂ ಓದಿ ⇒ ದಿನ ಭವಿಷ್ಯ | 19 ಆಗಸ್ಟ್ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?
ಕೋಳಿ ಸಾಗಿಸುತ್ತಿದ್ದ ವಾಹನ ಪಲ್ಟಿ
ಶಿವಮೊಗ್ಗ ಲೈವ್.ಕಾಂ : ಕುಡುಮಲ್ಲಿಗೆ ಸಮೀಪ ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಕೋಳಿಗಳನ್ನು ಸಾಗಿಸುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದೆ. 50ಕ್ಕೂ ಹೆಚ್ಚು ಕೋಳಿಗಳು ಮೃತಪಟ್ಟಿವೆ. ಶಿವಮೊಗ್ಗದ ಕಡೆಯಿಂದ ಉಡುಪಿ ಜಿಲ್ಲೆಗೆ ಹೊರಟಿದ್ದ ವಾಹನ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ವಾಹನ ಜಖಂಗೊಂಡಿದ್ದು, ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ ಜೋಗದಲ್ಲಿ ಬಸ್ಸಿಗೆ ಸಿಲುಕಿದ ಯುವಕ, ಗಂಭೀರ ಗಾಯ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200