ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | BUS | 23 ಏಪ್ರಿಲ್ 2022
ತೀರ್ಥಹಳ್ಳಿಯಲ್ಲಿ ಖಾಸಗಿ ಬಸ್ ಮತ್ತು ಸರ್ಕಾರಿ ಬಸ್ ಸಿಬ್ಬಂದಿಗಳ ನಡುವಿನ ಸಂಘರ್ಷ ಮುಂದುವರೆದಿದೆ. ನಿಲ್ದಾಣದೊಳಗೆ ಬಸ್ ಕೊಂಡೊಯ್ಯುವ ವಿಚಾರವಾಗಿ ಗಲಾಟೆಯಾಗಿದ್ದು, ಸರ್ಕಾರಿ ಬಸ್ ಕಂಡಕ್ಟರ್ ಮತ್ತು ಡ್ರೈವರ್ ಮೇಲೆ ಹಲ್ಲೆ ನಡೆಸಲಾಗಿದೆ.
ತೀರ್ಥಹಳ್ಳಿ ಬಸ್ ನಿಲ್ದಾಣದ ಮುಂಭಾಗ ಸರ್ಕಾರಿ ಮತ್ತು ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಗಲಾಟೆಯಾಗಿದೆ. ಇದು ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಏನಿದು ಗಲಾಟೆ?
ಶಿವಮೊಗ್ಗದಿಂದ ಉಡುಪಿಗೆ ತೆರಳುತ್ತಿದ್ದ ಕೆಎಸ್ಆರ್’ಟಿಸಿ ಬಸ್ಸು ತೀರ್ಥಹಳ್ಳಿ ಬಸ್ ನಿಲ್ದಾಣದೊಳಗೆ ತೆರಳುತ್ತಿತ್ತು. ಖಾಸಗಿ ಬಸ್ ಒಂದರ ಮಾಲೀಕ ಕೆಎಸ್ಆರ್’ಟಿಸಿ ಬಸ್ಸನ್ನು ತಡೆದು ನಿಲ್ಲಿಸಿದ್ದಾರೆ. ನಿಮ್ಮ ಬಸ್ಸು ಒಳಗೆ ಬರುವಂತಿಲ್ಲ ಎಂದು ತಾಕೀತು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ತಮ್ಮ ಬಸ್ಸಿನಿಂದ ಕೆಎಸ್ಆರ್’ಟಿಸಿ ಬಸ್ಸಿಗೆ ಡಿಕ್ಕಿ ಹೊಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂದರ್ಭ ಕೆಎಸ್ಆರ್’ಟಿಸಿ ಬಸ್ ಡ್ರೈವರ್, ಕಂಡಕ್ಟರ್ ಮತ್ತು ಖಾಸಗಿ ಬಸ್ ಮಾಲೀಕ, ಚಾಲಕ, ನಿರ್ವಾಹಕ, ಏಜೆಂಟ್ ನಡುವೆ ಗಲಾಟೆಯಾಗಿದೆ. ಕೆಎಸ್ಆರ್’ಟಿಸಿ ಬಸ್ ಚಾಲಕ ಕೃಷ್ಣಪ್ಪ, ಕಂಡಕ್ಟರ್ ರುದ್ರಾಚಾರಿ ಮೇಲೆ ಹಲ್ಲೆ ನಡೆಸಲಾಗಿದೆ. ಗಾಯಾಗಳುಗಳಿಗೆ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಘಟನೆ ಸಂಬಂಧ ಖಾಸಗಿ ಬಸ್ ಮಾಲೀಕ, ಚಾಲಕ, ನಿರ್ವಾಹಕ, ಏಜೆಂಟ್ ಮತ್ತು ಇತರೆ ನಾಲ್ವರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಮಕ್ಕಳ ಅಶ್ಲೀಲ ವಿಡಿಯೋ ಅಪ್ ಲೋಡ್ ಮಾಡಿದ ದುಮ್ಮಳ್ಳಿಯ ಯುವಕನಿಗೆ ಜೈಲು, ದಂಡ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






