Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶರಾವತಿ ಸಂತ್ರಸ್ಥರ ಸಮಸ್ಯೆ ಪರಿಹಾರಕ್ಕೆ 3 ಅವಕಾಶವಿತ್ತು, ತೀರ್ಥಹಳ್ಳಿಯಲ್ಲಿ ಸಿಎಂ

ಶರಾವತಿ ಸಂತ್ರಸ್ಥರ ಸಮಸ್ಯೆ ಪರಿಹಾರಕ್ಕೆ 3 ಅವಕಾಶವಿತ್ತು, ತೀರ್ಥಹಳ್ಳಿಯಲ್ಲಿ ಸಿಎಂ

27/11/2022 7:44 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 27 NOVEMBER 2022

ತೀರ್ಥಹಳ್ಳಿ : ಸಮಸ್ಯೆ ಹುಟ್ಟುಹಾಕಿ ಅದರಿಂದ ಎಷ್ಟು ಬಾರಿ ರಾಜಕೀಯ ಲಾಭ ಪಡೆಯಬೇಕು. ಜನರ ಬದುಕಿನ ವಿಚಾರ ಬಂದಾಗ ಎಲ್ಲರು ಒಗ್ಗೂಡಬೇಕು. ಇಲ್ಲಿ ರಾಜಕೀಯ ಮಾಡಬಾರದು. 60 ವರ್ಷವಾದರೂ ಶರಾವತಿ ಸಂತ್ರಸ್ಥರ ಸಮಸ್ಯೆ ಬಗೆಹರಿಸಲು ಹಿಂದಿನ ಸರ್ಕಾರಗಳಿಗೆ ಸಾಧ್ಯವಾಗಿಲ್ಲ ಎಂಬ ನೋವು ತಮಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. sharavathi issue

Shimoga Nanjappa hospital

ತೀರ್ಥಹಳ್ಳಿಯಲ್ಲಿ ಶಾಸಕ ಹರತಾಳು ಹಾಲಪ್ಪ ಅವರ ನೇತೃತ್ವದಲ್ಲಿ ಶರಾವತಿ ಮುಳುಗಡೆ ಸಂತ್ರಸ್ಥರ ವೇದಿಕೆಯ ಮನವಿ ಸ್ವೀಕರಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದರು.

‘ಅಧಿಕಾರ ಬರುತ್ತದೆ ಹೋಗುತ್ತದೆ. ನಮ್ಮ ವಿರುದ್ಧ ಹಲವರು ಮಾತನಾಡುತ್ತಿದ್ದಾರೆ. ಮಾತನಾಡುವವರೆಲ್ಲ ಕೆಲಸ ಮಾಡಿದ್ದರೆ ಇವತ್ತು ಹೋರಾಟ, ಪಾದಯಾತ್ರೆಯ ಅಗತ್ಯವಿರಲಿಲ್ಲ’ ಎಂದು ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿದರು. ಅಲ್ಲದೆ ಸರ್ವೆ ಕಾರ್ಯ ನಡೆಯುತ್ತಿದೆ. ಅರಣ್ಯ ಖಾತೆ ಸಚಿವರೊಂದಿಗೆ ಚರ್ಚೆ ನಡೆಸುತ್ತೇನೆ. ಶೀಘ್ರದಲ್ಲಿ ಈ ಸಮಸ್ಯೆಗೆ ಪರಿಹಾರ ಒದಗಿಸುತ್ತೇನೆ ಎಂದು ಭರವಸೆ ನೀಡರು.

sharavathi issue

ಪರಿಹಾರ ನೀಡಲು 3 ಅವಕಾಶವಿತ್ತು

ಅವಕಾಶ 1 – ಶರಾವತಿ ಯೋಜನೆಯಾಗಿದ್ದು 1978ರಲ್ಲಿ. ಅದಾದ ಬಳಿಕ ಅರಣ್ಯ ಸಂರಕ್ಷಣೆ ಕಾಯ್ದೆ ಜಾರಿಗೆ ಬಂತು. ಆಗಲೆ ಯೋಜನೆಗೆ ಜಾಗ ಬಿಟ್ಟುಕೊಟ್ಟವರಿಗೆ ಪರಿಹಾರ ನೀಡಲು ಅವಕಾಶವಿತ್ತು ಎಂದು ಸಿಎಂ ತಿಳಿಸಿದರು.

ಅವಕಾಶ 2 – 1978ಕ್ಕಿಂತಲು ಮೊದಲು ಮೀಸಲು ಅರಣ್ಯ ಯಾವುದು, ವನ್ಯಜೀವಿ ಅರಣ್ಯ ಅರಣ್ಯ ಯಾವುದು ಅನ್ನುವುದರ ಮಾಹಿತಿಯನ್ನು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿತ್ತು. ಸರ್ವೆ ಮಾಡಿದಾಗ ಶರಾವತಿ ಯೋಜನೆಗೆ ಜಾಗ ಬಿಟ್ಟುಕೊಟ್ಟವರ ಬಳಿ ಇರುವ ಜಾಗ ಹೊರತು, ಉಳಿದ ಜಾಗವನ್ನು ಅರಣ್ಯ ಎಂದು ಘೋಷಿಸಲು ಅವಕಾಶವಿತ್ತು.

ಅವಕಾಶ 3 – 1978ರಿಂದ 1980ರವರೆಗೆ ಮರು ಸರ್ವೆಗೆ ಅವಕಾಶವಿತ್ತು. ಆಗಲೂ ಶರಾವತಿ ಸಂತ್ರಸ್ಥರಿಗೆ ಜಮೀನು ಕೊಡಲು ಸಾಧ್ಯವಾಗಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

sharavathi issue

ನಮ್ಮ ತಲೆಗೆ ಕಟ್ಟಲು ನೋಡುತ್ತಿದ್ದಾರೆ

ಇದಕ್ಕೂ ಮೊದಲು ಮಾತನಾಡಿದ ಶಾಸಕ ಹರತಾಳು ಹಾಲಪ್ಪ ಅವರು, ಶರಾವತಿ ಸಂತ್ರಸ್ಥರು ನೆಲೆ LIC HOUSIN FINANCE SHIMOGA jpgಕಂಡುಕೊಂಡಿರುವ ಭೂಮಿಯ ವಿಚಾರವಾಗಿ, ಜಿಲ್ಲಾಧಿಕಾರಿ, ಅರಣ್ಯ ಇಲಾಖೆಯಿಂದ ಸರ್ವೆಗೆ ಅದೇಶ ಕೊಡಬೇಕು. 60 ವರ್ಷದ ಸಮಸ್ಯೆಗೆ ಮುಕ್ತಿ ನೀಡಬೇಕು. ಈ ಸಮಸ್ಯೆಗೆ ಯಡಿಯೂರಪ್ಪ, ರಾಘವೇಂದ್ರ ಮತ್ತು ಈಗಿನ ಸರ್ಕಾರ ಕಾರಣವಲ್ಲ. ಇದು ಹಿಂದಿನ ಸರ್ಕಾರದ ಪಾಪದ ಕೂಸು. ಅದನ್ನು ನಮ್ಮ ತಲೆಗೆ ಕಟ್ಟಲು ಪ್ರಯತ್ನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ALSO READ – ಎಲೆ ಚುಕ್ಕೆ, ತೀರ್ಥಹಳ್ಳಿಯ ತೋಟಕ್ಕೆ ಸಿಎಂ ಭೇಟಿ, ಇಲ್ಲಿದೆ ಬೊಮ್ಮಾಯಿ ಹೇಳಿದ 3 ಪ್ರಮುಖಾಂಶ

24 ಸಾವಿರ ಎಕರೆಯಲ್ಲಿ ನಾವು ವಾಸವಾಗಿದ್ದೇವೆ. ಅದು ಅರಣ್ಯವೋ, ಗೋಮಾಳವೋ, ಗ್ರಾಮ ಠಾಣವೋ https://chat.whatsapp.com/KChu2C1bGTM2v9HmZlfIkSಗೊತ್ತಿಲ್ಲ. ಕೇಂದ್ರ ಸರ್ಕಾರದವರೆಗೆ ಈ ವಿಚಾರ ಕೊಂಡೊಯ್ದು ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಹರತಾಳು ಹಾಲಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಗ್ರಹಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಶಾಸಕ ಸ್ವಾಮಿ ರಾವ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.

Shimoga Nanjappa Hospital

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

June-2025-Report-Shivamogga-Live-New

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 271122 Chief MInister visit Areca Plantation in Thirthahalli ಎಲೆ ಚುಕ್ಕೆ, ತೀರ್ಥಹಳ್ಳಿಯ ತೋಟಕ್ಕೆ ಸಿಎಂ ಭೇಟಿ, ಇಲ್ಲಿದೆ ಬೊಮ್ಮಾಯಿ ಹೇಳಿದ 3 ಪ್ರಮುಖಾಂಶ
Next Article Rain-at-Shimoga-Kote-Road ಶಿವಮೊಗ್ಗದಲ್ಲಿ ರಾತ್ರಿ ಜೋರು ಮಳೆ, ಇನ್ನೂ ಎರಡ್ಮೂರು ದಿನ ವರುಣನ ಅರ್ಭಟ ಸಾದ್ಯತೆ

ಇದನ್ನೂ ಓದಿ

Tooduru-name-board-at-Thirthahalli
THIRTHAHALLI

ತೂದೂರಿನ ಬಟ್ಟೆ ಅಂಗಡಿಗೆ ಕೆಂಪು ಕಾರಿನಲ್ಲಿ ಬಂದ ಗ್ರಾಹಕ, ಆತ ಹೋದ ಮೇಲೆ ಮಾಲೀಕನಿಗೆ ಕಾದಿತ್ತು ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/07/2025
Yogendra-gowda-incident-near-devangi-in-thirthahalli.
THIRTHAHALLI

ಮರದ ದಿಮ್ಮಿ ಉರುಳಿ ಕಾರ್ಮಿಕನ ತಲೆಗೆ ಗಂಭೀರ ಗಾಯ, ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
tree-falls-to-agumbe-road-in-Thirthahalli.
THIRTHAHALLI

ಆಗುಂಬೆ ಘಾಟಿ ಸಮೀಪ ಧರೆಗುರುಳಿದ ಮರ, ಕೆಲಕಾಲ ಹೆದ್ದಾರಿ ಬಂದ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
agumbe-ghat-road-during-rainy-season
HOSANAGARASAGARATHIRTHAHALLI

ಹೊಸನಗರ, ಸಾಗರದಲ್ಲಿ ಭಾರಿ ಮಳೆ, ಆಗುಂಬೆ ಭಾಗದಲ್ಲಿ ಬಿಡುವು ಕೊಡದ ವರ್ಷಧಾರೆ, ಎಲ್ಲೆಲ್ಲಿ ಜೋರು ಮಳೆಯಾಗ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
AGUMBE-GHAT-THIRTHAHALLI.
THIRTHAHALLI

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಎಷ್ಟು ದಿನ? ಕಾರಣವೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/06/2025
Truck-problem-at-Agumbe-Ghat
THIRTHAHALLI

ಆಗುಂಬೆ ಘಾಟಿ ತಿರುವಿನಲ್ಲೇ ಕೆಟ್ಟು ನಿಂತ ಕ್ಯಾಂಟರ್‌, ಟ್ರಾಫಿಕ್‌ ಜಾಮ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?