ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 13 ಆಗಸ್ಟ್ 2019
ಭಾರಿ ಮಳೆಗೆ ಗುಡ್ಡ ಕುಸಿದು ಸುಮಾರು 40 ಎಕರೆ ಜಮೀನು ಹಾನಿಯಾಗಿರುವ ಹೆಗಲತ್ತಿ ಗ್ರಾಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದರು. ಜಮೀನು ಹಾನಿಯಾಗಿರುವುದನ್ನು ಪರಿಶೀಲನೆ ನಡೆಸಿದ ಸಿಎಂ, ರೈತರಿಗೆ ಪರಿಹಾರದ ಭರವಸೆ ನೀಡಿದರು.
ಹೆಗಲತ್ತಿ ಗ್ರಾಮದಲ್ಲಿ ಗುಡ್ಡ ಕುಸಿತದಿಂದ 40 ಎಕರೆಯಷ್ಟು ಜಮೀನು ಹಾನಿಯಾಗಿದೆ. ಅಡಕೆ ಮರಗಳು ನೆಲಸಮವಾಗಿವೆ. ಬಾಳೆ ಬೆಳೆ ಹಾನಿಯಾಗಿದೆ.
ವರದಿ ಬಳಿಕ ಪರಿಹಾರ
ಇನ್ನು, ಹೆಗಲತ್ತಿ ಗ್ರಾಮದಲ್ಲಿ ಬೆಳೆಹಾನಿ ಕುರಿತು ಕಂದಾಯ ಇಲಾಖೆ ಅಧಿಕಾರಿಗಳು ವರದಿ ಸಿದ್ಧಪಡಿಸಲಿದ್ದಾರೆ. ಅದರ ಆಧಾರದ ಮೇಲೆ ಪರಿಹಾರ ವಿತರಿಸಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಸಿಎಂ ಏನೆಲ್ಲ ಹೇಳಿದರು? ಅದರ ವಿಡಿಯೋ ರಿಪೋರ್ಟ್ ಇಲ್ಲಿದೆ
ಇದೆ ವೇಳೆ ನೆರೆಯಿಂದ ಜಾನುವಾರು ಕಳೆದುಕೊಂಡವರಿಗೆ ಸಿಎಂ ಯಡಿಯೂರಪ್ಪ ಪರಿಹಾರದ ಚೆಕ್ ವಿತರಿಸಿದರು.
ಸಂಸದ ಬಿ.ವೈ.ರಾಘವೇಂದ್ರ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರವಿಕುಮಾರ್, ಜಿಲ್ಲಾಧಿಕಾರಿ ಶಶಿಕುಮಾರ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200