ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 10 DECEMBER 2024
ತೀರ್ಥಹಳ್ಳಿ : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಎಸ್.ಎಂ.ಕೃಷ್ಣ ಪತ್ನಿ ಪ್ರೇಮಾ ಅವರ ತವರು ಕುಡುಮಲ್ಲಿಗೆ ಗ್ರಾಮದಲ್ಲಿ ಗ್ರಾಮಸ್ಥರು ಕಂಬನಿ (Condolence) ಮಿಡಿದಿದ್ದಾರೆ. ಕುಡುಮಲ್ಲಿಗೆಯಲ್ಲಿ ಎಸ್.ಎಂ.ಕೃಷ್ಣ ಅವರ ಬೃಹತ್ ಫ್ಲೆಕ್ಸ್ ಅಳವಡಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಎಸ್.ಎಂ.ಕೃಷ್ಣ ಅವರು ರಾಜ್ಯದ ವರ್ಣರಂಜಿತ, ಉತ್ತಮ ಆಡಳಿತಗಾರರಾಗಿದ್ದರು ಎಂದು ಬಿಜೆಪಿ ಮುಖಂಡ ಬೇಗುವಳ್ಳಿ ಸತೀಶ್ ಸ್ಮರಿಸಿಕೊಂಡರು. ಗ್ರಾಮಸ್ಥರಾದ ರಮೇಶ್ ಶೆಟ್ಟಿ, ಅಂಜೂರ್ ಕುಡುಮಲ್ಲಿಗೆ, ಅತಿಥಿ ಮನೋಹರ್, ಕಿರಣ್ ಸೇರಿದಂತೆ ಹಲವರು ಇದ್ದರು.

ಮನೆಯಲ್ಲಿ ನೀರವ ಮೌನ
ಇನ್ನು, ಎಸ್.ಎಂ.ಕೃಷ್ಣ ಪತ್ನಿ ಪ್ರೇಮಾ ಅವರ ಮನೆಯಲ್ಲಿ ನೀರವ ಮೌನ ಆವರಿಸಿದೆ. ಮನೆಯಲ್ಲಿದ್ದವರೆಲ್ಲರು ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿಗೆ ತೆರಳಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದನ್ನೂ ಓದಿ » ತೀರ್ಥಹಳ್ಳಿಯ ಅಳಿಯ ಎಸ್.ಎಂ.ಕೃಷ್ಣ ಇನ್ನಿಲ್ಲ, ಕುಡುಮಲ್ಲಿಗೆಯಲ್ಲಿ ನೀರವ ಮೌನ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















