SHIVAMOGGA LIVE NEWS, 10 DECEMBER 2024
ತೀರ್ಥಹಳ್ಳಿ : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಎಸ್.ಎಂ.ಕೃಷ್ಣ ಪತ್ನಿ ಪ್ರೇಮಾ ಅವರ ತವರು ಕುಡುಮಲ್ಲಿಗೆ ಗ್ರಾಮದಲ್ಲಿ ಗ್ರಾಮಸ್ಥರು ಕಂಬನಿ (Condolence) ಮಿಡಿದಿದ್ದಾರೆ. ಕುಡುಮಲ್ಲಿಗೆಯಲ್ಲಿ ಎಸ್.ಎಂ.ಕೃಷ್ಣ ಅವರ ಬೃಹತ್ ಫ್ಲೆಕ್ಸ್ ಅಳವಡಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಎಸ್.ಎಂ.ಕೃಷ್ಣ ಅವರು ರಾಜ್ಯದ ವರ್ಣರಂಜಿತ, ಉತ್ತಮ ಆಡಳಿತಗಾರರಾಗಿದ್ದರು ಎಂದು ಬಿಜೆಪಿ ಮುಖಂಡ ಬೇಗುವಳ್ಳಿ ಸತೀಶ್ ಸ್ಮರಿಸಿಕೊಂಡರು. ಗ್ರಾಮಸ್ಥರಾದ ರಮೇಶ್ ಶೆಟ್ಟಿ, ಅಂಜೂರ್ ಕುಡುಮಲ್ಲಿಗೆ, ಅತಿಥಿ ಮನೋಹರ್, ಕಿರಣ್ ಸೇರಿದಂತೆ ಹಲವರು ಇದ್ದರು.
ಮನೆಯಲ್ಲಿ ನೀರವ ಮೌನ
ಇನ್ನು, ಎಸ್.ಎಂ.ಕೃಷ್ಣ ಪತ್ನಿ ಪ್ರೇಮಾ ಅವರ ಮನೆಯಲ್ಲಿ ನೀರವ ಮೌನ ಆವರಿಸಿದೆ. ಮನೆಯಲ್ಲಿದ್ದವರೆಲ್ಲರು ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿಗೆ ತೆರಳಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದನ್ನೂ ಓದಿ » ತೀರ್ಥಹಳ್ಳಿಯ ಅಳಿಯ ಎಸ್.ಎಂ.ಕೃಷ್ಣ ಇನ್ನಿಲ್ಲ, ಕುಡುಮಲ್ಲಿಗೆಯಲ್ಲಿ ನೀರವ ಮೌನ