ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ, ಮೃತ ರೈತನ ಕುಟುಂಬಕ್ಕೆ ಸಾಂತ್ವನ, ಮರ ಬಿದ್ದ ಸ್ಥಳ ಪರಿಶೀಲನೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 6 ಆಗಸ್ಟ್ 2019

ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ನಿನ್ನೆ ಧರೆ ಕುಸಿದು ಮೃತಪಟ್ಟಿದ್ದ ರೈತನ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಕನ್ನಂಗಿಯ ಗ್ರಮ ಪಂಚಾಯಿತಿಯ ಕಳವತ್ತಿಯ ರೈತ ರಮೇಶ್ ಮೃತಪಟ್ಟಿದ್ದರು. ಜಿಲ್ಲಾಧಿಕಾರಿ ಅವರು ಇವತ್ತು ಆಸ್ಪತ್ರೆಗೆ ಭೇಟಿ ನೀಡಿ, ಮೃತದೇಹ ವೀಕ್ಷಿಸಿದರು. ನಂತರ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.

ನಂತರ ಜೆಸಿ ಆಸ್ಪತ್ರೆಯ ಮೂಲಸೌಕರ್ಯ ಕುರಿತು ಪರಿಶೀಲನೆ ನಡೆಸಿ, ವೈದ್ಯಾಧಿಕಾರಿಯಿಂದ ಮಾಹಿತಿ ಪಡೆದರು. ಇದೇ ವೇಳೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣಾ ಕೇಂದ್ರಕ್ಕೂ ಜಿಲ್ಲಾಧಿಕಾರಿ ದಯಾನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನು, ನಿನ್ನೆ ಗಾಳಿ, ಮಳೆಗೆ ತೀರ್ಥಹಳ್ಳಿಯ ಸಹ್ಯಾದ್ರಿ ಸ್ಕೂಲ್ ಆವರಣದಲ್ಲಿ ಮರ ಬಿದ್ದು ಹಾನಿಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ದಯಾನಂದ್, ಅಧಿಕಾರಿಗಳು ಮತ್ತು ಶಾಲೆ ಸಿಬ್ಬಂದಿಯಿಂದ ಮಾಹಿತಿ ಪಡೆದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment