| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA | 31 ಅಕ್ಟೋಬರ್ 2019
ಮಲೆನಾಡು ಭಾಗದ ಸರ್ಕಾರಿ ಶಾಲೆ ಉಳಿವಿಗೆ ಯುವಕರ ವಿಭಿನ್ನ ಪ್ರಯತ್ನ. ಅಂಟಿಗೆ ಪಂಟಿಗೆ ಮೂಲಕ ಜನರಲ್ಲಿ ಜಾಗೃತಿ. ಮನೆ ಮನೆಗು ತೆರಳಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಮನವಿ.
ಮಲೆನಾಡಿಗರ ಪ್ರಮುಖ ಆಚರಣೆಗಳಲ್ಲಿ ಒಂದು ಅಂಟಿಗೆ ಪಂಟಿಗೆ. ದೀಪಾವಳಿ ಸಂದರ್ಭ ಮನೆ ಮನೆಗು ತೆರಳಿ ದೀಪ ಬೆಳಗಿಸಲಾಗುತ್ತದೆ. ಇದೆ ಅಂಟಿಗೆ ಪಂಟಿಗೆಯನ್ನು ಸರ್ಕಾರಿ ಶಾಲೆ ಉಳಿವಿನ ಜಾಗೃತಿ ಯಾತ್ರೆಯಾಗಿ ಪರಿವರ್ತಿಸಿಕೊಂಡಿದೆ ತೀರ್ಥಹಳ್ಳಿಯ ಯುವಕರ ತಂಡ.
ಎರಡು ವರ್ಷದಿಂದ ಇವರ ಪ್ರಯತ್ನಕ್ಕೆ ತೀರ್ಥಹಳ್ಳಿ ಭಾಗದಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ. ಅಂಟಿಗೆ ಪಂಟಿಗೆ ತಂಡ ಮನೆ ಮೆನಗು ತೆರಳಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಜಾಗೃತಿ ಮೂಡಿಸುತ್ತಾರೆ. ಮನೆಯವರು ನೀಡುವ ಕಾಣಿಕೆ ಹಣವನ್ನು ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಸಮೀಪದ ಕೆಂದಾಳಬೈಲು ಗ್ರಾಮದಲ್ಲಿರುವ ಸರ್ಕಾರಿ ಶಾಲೆ ಉಳಿವಿಗಾಗಿ ಅಂಟಿಗೆ ಪಂಟಿಗೆ ನಡೆಸಲಾಯಿತು.
ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಅರಂಭವಾದ ಅಂಟಿಗೆ ಪಂಟಿಗೆಗೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ನೀಡಿದರು. ಹೇಗಿದೆ ಅಂಟಿಗೆ ಪಂಟಿಗೆ ತಂಡ? ಯಾರೆಲ್ಲ ಇದ್ದಾರೆ? ಇದರ ಕಂಪ್ಲೀಟ್ ವಿಡಿಯೋ ಲಿಂಕ್ ಮೇಲಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಾಲಿವುಡ್ ನಟರ ಫೋಟೊಗಳಿಗೆ ಚಪ್ಪಲಿ ಏಟು, ಕಾರಣವೇನು?
- ಆಯನೂರು ಸೇರಿ ಹಲವೆಡೆ ಡಿ.17ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಓದಲು ಇಲ್ಲಿ ಕ್ಲಿಕ್ ಮಾಡಿ
- ಅಡಿಕೆ ಧಾರಣೆ | 16 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್ಪ್ರೆಸ್ಗೆ ಬದಲಿ ಮಾರ್ಗ
- ಶಿವಮೊಗ್ಗದಲ್ಲಿ ಮೂರು ದಿನ ಕಣ್ಣಿನ ಉಚಿತ ತಪಾಸಣೆ, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು?
- ಶಿವಮೊಗ್ಗದ ಬಸವನಗುಡಿ, ವಿದ್ಯಾನಗರದಲ್ಲಿ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
![]()