ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 1 JUNE 2023
SHIMOGA : ರಾಜ್ಯ ಕಾಂಗ್ರೆಸ್ ವತಿಯಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ಪೂರ್ಯ ತಯಾರಿಗೆ ಸಮಿತಿ ರಚಿಸಲಾಗಿದೆ. ಕಾಂಗ್ರೆಸ್ ಮುಖಂಡ ಆರ್.ಎಂ.ಮಂಜುನಾಥ ಗೌಡ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ. ಈ ಸಂಬಂಧ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಜುನಾಥ ಗೌಡ ಅವರಿಗೆ ಪತ್ರ (Letter) ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?
ಸರ್ಕಾರ ರಚನೆಯಾಗಿ ಕಾರ್ಯನಿರ್ವಹಿಸಲು ಸಜ್ಜಾಗುತ್ತಿದ್ದಂತೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಎದುರಾಗಿದೆ. ಈ ಹಿನ್ನೆಲೆ ಇವೆರಡು ಚುನಾವಣೆಗಳನ್ನು ನಡೆಸಲು ಕಾನೂನಾತ್ಮಕ ಸಾಧಕ ಬಾಧಕಗಳನ್ನು ಪರಾಮರ್ಶಿಸಿ ವರದಿ ನೀಡಲು ಸಮಿತಿ ರಚಿಸಲಾಗಿದೆ. ಸಮಿತಿಯು ಚರ್ಚೆ ನಡೆಸಿ, ಸ್ಥಳೀಯ ಮುಖಂಡರನ್ನು ಸಂಪರ್ಕಿಸಿ ಬಹುಮತ ಪಡೆಯುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪತ್ರದಲ್ಲಿ (Letter) ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಮೂರು ವರ್ಷದ ಬಳಿಕ ಮಂಜುನಾಥ ಗೌಡ ಎಂಟ್ರಿ, ನಿರ್ದೇಶಕ ಸ್ಥಾನ ಊರ್ಜಿತ, ಏನಿದು ಪ್ರಕರಣ?
ಯಾರೆಲ್ಲ ಇದ್ದಾರೆ ಸಮಿತಿಯಲ್ಲಿ?
ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಸಮಿತಿ ಅಧ್ಯಕ್ಷ. ಸಚಿವರಾದ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಸಚಿವರಾದ ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಬಸವರಾಜ ರಾಯರೆಡ್ಡಿ, ಡಾ.ಶರಣ ಪ್ರಕಾಶ್ ಪಾಟೀಲ್, ಆರ್.ಬಿ.ತಿಮ್ಮಾಪುರ, ಶಾಸಕರಾದ ರೂಪಾ ಶಶಿಧರ್, ಎ.ಎಸ್.ಪೊನ್ನಣ್ಣ, ಕೆ.ಎಂ.ಶಿವಲಿಂಗೇಗೌಡ, ಎಸ್.ಆರ್.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಕೆಪಿಸಿಸಿ ಉಪಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಸಮಿತಿ ಸಂಚಾಲಕರಾಗಿದ್ದಾರೆ. ಮಾಜಿ ಸಂಸದ ನಾರಾಯಣಸ್ವಾಮಿ, ಮಾಜಿ ಶಾಸಕ ವಿಜಯ ಸಿಂಗ್, ಆರ್.ಎಂ.ಮಂಜುನಾಥ ಗೌಡ ಅವರು ಸಮಿತಿಯಲ್ಲಿ ಇದ್ದಾರೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

About The Editor
ನಿತಿನ್ ಆರ್.ಕೈದೊಟ್ಲು






