SHIVAMOGGA LIVE NEWS |31 DECEMBER 2022
ತೀರ್ಥಹಳ್ಳಿ : ಪಟ್ಟಣದ ಬಳಿ ಕಾಡಾನೆ (elephant in city) ಕಾಣಿಸಿಕೊಂಡಿದ್ದು ಆತಂಕ ಮೂಡಿಸಿದೆ. ಹೆದ್ದಾರಿಯಲ್ಲಿ ಸಂಚರಿಸಿರುವ ಆನೆ ಕೊನೆಗೆ ತುಂಗಾ ನದಿಗೆ ಇಳಿದಿದೆ. ಆನೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.
ತೀರ್ಥಹಳ್ಳಿ ಪಟ್ಟಣದ (elephant in city) ಕುರುವಳ್ಳಿ ಸಮೀಪ ಕಾಡಾನೆ ಪ್ರತ್ಯಕ್ಷವಾಗಿದೆ. ವಿವಿಧೆಡೆ ಸಂಚರಿಸಿರುವ ಆನೆ ಎನ್.ಆರ್.ಪುರ ಕಡೆಯಿಂದ ಬಂದಿರಬಹುದು ಎಂದು ಶಂಕಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಬೋರ್ಡ್, ಕಾಂಪೌಂಡ್ ಹಾನಿ
ಕಳೆದ ರಾತ್ರಿ ಮೇಳಿಗೆ ಗ್ರಾಮದ ಕೆಳಕೆರೆಯಲ್ಲಿ ಕಾಡಾನೆ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಬೆಳಗಿನ ಜಾವ ಕುರುವಳ್ಳಿ ಬಳಿ ಪ್ರತ್ಯಕ್ಷವಾಗಿದೆ. ಕುರುವಳ್ಳಿ ಬಳಿ ಮುಖ್ಯ ರಸ್ತೆಯಲ್ಲಿ ಸಂಚರಿಸಿದೆ. ರಸ್ತೆ ಬದಿಯಲ್ಲಿ ಹಾಕಿದ್ದ ಅಂಗಡಿಯೊಂದರ ಬೋರ್ಡ್, ಕುರುವಳ್ಳಿಯಲ್ಲಿ ಕೌಂಪೌಂಡ್ ಹಾನಿಗೊಳಿಸಿದೆ ಎಂದು ಹೇಳಲಾಗುತ್ತಿದೆ. ಬಳಿಕ ತುಂಗಾ ನದಿಗೆ ಇಳಿದು ಹೋಗಿರುವ ಸಾದ್ಯತೆ ಇದೆ.
ಕುರುವಳ್ಳಿಯಲ್ಲಿ ಆನೆಯ ಹೆಜ್ಜೆ ಗುರುತು ಪತ್ತೆಯಾಗಿದೆ. ಎನ್.ಆರ್.ಪುರ ಭಾಗದಲ್ಲಿ ಕಳೆದ ಕೆಲವು ದಿನದಿಂದ ಆನೆ ಕಾಣಿಸಿಕೊಂಡಿತ್ತು. ಇದೆ ಆನೆ ತೀರ್ಥಹಳ್ಳಿ ಪಟ್ಟಣದ ಕಡೆಗೆ ಬಂದಿರಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ – ಚಿರತೆ ಭೀತಿ, ಕೆಪಿಸಿ ಕಾಲೋನಿಯಲ್ಲಿ ದನದ ಮೇಲೆ ದಾಳಿ
ತೀರ್ಥಹಳ್ಳಿ ಪಟ್ಟಣದ ಬಳಿ ಆನೆ ಕಾಣಿಸಿಕೊಂಡಿರುವ ವಿಚಾರ ತಿಳಿದು ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.