SHIVAMOGGA LIVE NEWS | 28 ಫೆಬ್ರವರಿ 2022
ಮಂಡಗದ್ದೆ ಸಮೀಪ ಕಾಡಾನೆಗಳ ಹಾವಳಿ ಶುರುವಾಗಿದೆ. ತೋಟಗಳಿಗೆ ದಾಳಿ ಮಾಡಿ ಅಡಕೆ, ಬಾಳೆ ಬೆಳೆಗೆ ಹಾನಿ ಮಾಡುತ್ತಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.
ಆನೆಗಳ ಗುಂಪು ಮಂಡಗದ್ದೆ ಸಮೀಪದ ಕೀಗಡಿ, ಮೇಲಿನ ಕೀಗಡಿ, ಮೂಡ್ಲುಮನೆ ಭಾಗದಲ್ಲಿ ಓಡಾಡಿಕೊಂಡಿವೆ. ರಾತ್ರಿ ವೇಳೆ ತೋಟಗಳಿಗೆ ದಾಳಿ ಮಾಡುತ್ತಿರುವ ಆನೆಗಳು ಬೆಳೆ ಹಾನಿ ಮಾಡುತ್ತಿವೆ. ಆದ್ದರಿಂದ ರೈತರು ತೋಟಗಳಿಗೆ ಹೋಗಲು ಹೆದರುತ್ತಿದ್ದಾರೆ.
ಕೀಗಡಿಯ ಶೇಶಪ್ಪ, ಧರ್ಮಣ್ಣಪ್ಪ, ಹೇಮೇಶ್, ಉಪೇಂದ್ರ ಗೌಡ ಅವರ ತೋಟಗಳಿಗೆ ಆನೆಗಳು ದಾಳಿ ಮಾಡಿ ಅಡಕೆ, ಬಾಳೆ ಬೆಳೆಗೆ ನಷ್ಟ ಉಂಟು ಮಾಡಿವೆ ಎಂದು ತಿಳಿದು ಬಂದಿದೆ. ಬಾಳೆ ಬೆಳೆ ಕಟಾವಿಗೆ ಬಂದ ವೇಳೆ ದಾಳಿ ನಡೆಸಿದ್ದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ.
ಇದನ್ನೂ ಓದಿ | ಆನಂದಪುರ ಸಮೀಪ ಅರಣ್ಯ ಸಂಚಾರಿ ದಳ ದಾಳಿ, ಎರಡು ಚೀಲ ಹಿಡಿದಿದ್ದವನು ಅರೆಸ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200