Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆಗೆ ಚಾಲನೆ, ರಾಮ ಕುಂಡದಲ್ಲಿ ಸಾವಿರಾರು ಭಕ್ತರಿಂದ ಪುಣ್ಯ ಸ್ನಾನ

ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆಗೆ ಚಾಲನೆ, ರಾಮ ಕುಂಡದಲ್ಲಿ ಸಾವಿರಾರು ಭಕ್ತರಿಂದ ಪುಣ್ಯ ಸ್ನಾನ

02/01/2022 10:47 AM
ನಿತಿನ್‌ ಕೈದೊಟ್ಲು

ಶಿವಮೊಗ್ಗದ ಲೈವ್.ಕಾಂ | SHIMOGA NEWS |  2 ಜನವರಿ 2022

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಪುರಾಣ ಪ್ರಸಿದ್ಧ ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆಗೆ ಚಾಲನೆ ಸಿಕ್ಕಿದೆ. ತುಂಗಾ ನದಿಯಲ್ಲಿ ಭಕ್ತರು ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಕರೋನ ಹಿನ್ನೆಲೆಯಲ್ಲಿ ಮೂರು ದಿನ ಸರಳವಾಗಿ ಜಾತ್ರೆ ನಡೆಯಲಿದೆ.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ರಾಮ ಕುಂಡದಲ್ಲಿ ಪುಣ್ಯ ಸ್ನಾನ

ಜಾತ್ರೆಯ ಮೊದಲ ದಿನ ತುಂಗಾ ನದಿಯಲ್ಲಿರುವ ರಾಮ ಕುಂಡದಲ್ಲಿ ಪುಣ್ಯ ಸ್ನಾನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಸಾವಿರಾರು ಜನರು ರಾಮ ಕುಂಡದಲ್ಲಿ ಪುಣ್ಯ ಸ್ನಾನ ಮಾಡುತ್ತಾರೆ. ಇದರಿಂದ ಪಾಪ ಪರಿಹಾರವಾಗಲಿದೆ ಎಂಬ ನಂಬಿಕೆ ಇದೆ. ಇದನ್ನು ಮಾತೃ ಹತ್ಯೆ ದೋಷ ಪರಿಹಾರದ ಪುಣ್ಯ ಸ್ಥಳ ಎಂದು ಕರೆಯಲಾಗುತ್ತಾದೆ.

ಏನಿದು ಮಾತೃ ಹತ್ಯೆ ದೋಷ ಪರಿಹಾರ?

ಋಷಿ ಜಮದಗ್ನಿಯು ತನ್ನ ಪತ್ನಿ ರೇಣುಕಾದೇವಿಯ ಶಿರಚ್ಛೇದನ ಮಾಡುವಂತೆ ಮಕ್ಕಳಿಗೆ ಸೂಚಿಸುತ್ತಾರೆ. ನಿರಾಕರಿಸಿದ ನಾಲ್ವರು ಮಕ್ಕಳು ಶಾಪಕ್ಕೆ ತುತ್ತಾಗುತ್ತಾರೆ. ಮಗ ಪರಶುರಾಮ ಮಾತ್ರ ತಾಯಿಯ ಶಿರಚ್ಛೇದ ಮಾಡುತ್ತಾನೆ. ಎಷ್ಟೆ ತೊಳೆದರೂ ಕೊಡಲಿಗೆ ಅಂಟಿದ್ದ ಎಳ್ಳಿನಷ್ಟು ರಕ್ತದ ಕಲೆ ಹಾಗೆ ಉಳಿಯುತ್ತದೆ.

ಮಾತೃಹತ್ಯೆ ದೋಷದಿಂದ ಪರಿಹಾರಕ್ಕೆ ಪರಶುರಾಮನು ಊರೂರು ಸುತ್ತುತ್ತಾನೆ. ಒಮ್ಮೆ ತುಂಗಾ ನದಿಯ ಬಳಿ ವಿಹರಿಸುವಾಗ ಆಕಸ್ಮಿಕವಾಗಿ ಕೊಡಲಿ ಕೈ ಜಾರಿ ಬಂಡೆಯೊಂದರ ಮೇಲೆ ಬೀಳುತ್ತದೆ. ಬಂಡೆ ಎರಡು ಭಾಗವಾಗುತ್ತದೆ. ಕೊಡಲಿಗೆ ತುಂಗಾ ನದಿ ನೀರು ಸೋಕಿ, ಅಂಟಿದ್ದ ರಕ್ತದ ಕಲೆ ಅಳಿಸಿ ಹೋಗುತ್ತದೆ. ಇದನ್ನು ಕಂಡು ಪುನೀತನಾದ ಪರಶುರಾಮ, ಮಾತೃಹತ್ಯೆ ದೋಷದಿಂದ ಮುಕ್ತನಾಗುತ್ತಾನೆ. ಬಂಡೆ ಸೀಳಿದ ಜಾಗವೆ ರಾಮ ಕುಂಡವಾಗಿದೆ. ಹಾಗಾಗಿ ಇಲ್ಲಿ ಸ್ನಾನ ಮಾಡಿದರೆ ಪುಣ್ಯ ಪ್ರಾಪ್ತಿಯಾಗಲಿದೆ ಎಂಬ ನಂಬಿಕೆ ಇದೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ರಾಮ ಕುಂಡದ ಬಳಿ ಪಲ್ಲಕ್ಕಿ ಪೂಜೆ

ಇವತ್ತು ಬೆಳಗಿನ ಜಾವ ತುಂಗಾ ನದಿಯಲ್ಲಿ ರಾಮ ಕುಂಡದ ಬಳಿ ಶ್ರೀ ರಾಮೇಶ್ವರ ದೇವರ ಉತ್ಸವ ಪಲ್ಲಕ್ಕಿಯ ಪೂಜಾ ಕಾರ್ಯ ನಡೆಯಿತು. ಪರಶುರಾಮ ಪ್ರತಿಷ್ಠಾಪಿಸಿದ ಈಶ್ವರ ಲಿಂಗವು ಇಲ್ಲಿದ್ದು, ಇದಕ್ಕೂ ಪೂಜೆ ಸಲ್ಲಿಸಲಾಯಿತು. ಆ ಬಳಿಕ ಸಾವಿರಾರು ಭಕ್ತರು ಸಾಲುಗಟ್ಟಿ ನಿಂತು, ರಾಮ ಕುಂಡದಲ್ಲಿ ಪವಿತ್ರ ಸ್ನಾನ ಮಾಡಿದರು. ತೀರ್ಥಹಳ್ಳಿ ಸೇರಿದಂತೆ ಸುತ್ತಮುತ್ತಲ ಊರುಗಳಿಂದ ಭಕ್ತರು ಇಲ್ಲಿ ಬಂದು ಪುಣ್ಯ ಸ್ನಾನ ಮಾಡುತ್ತಾರೆ.

ದೇಗುಲಕ್ಕೆ ಭಕ್ತರ ಸಾಗರ

ಜಾತ್ರೆಯ ಮೊದಲ ದಿನವಾದ್ದರಿಂದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಬೆಳ್ಗೆಯಿಂದಲೇ ವಿವಿಧೆಡೆಯಿಂದ ಭಕ್ತರು ಆಗಮಿಸಿ, ಪೂಜೆ ಸಲ್ಲಿಸುತ್ತಿದ್ದಾರೆ. ಇನ್ನು, ಜಾತ್ರೆ ಅಂಗವಾಗಿ ದೇವಸ್ಥಾನವನ್ನು ವಿಶೇಷವಾಗಿ ಅಲಂಕಾರ ಮಾಡಲಾಗಿದೆ.

ಇವತ್ತು ಪುಣ್ಯ ಸ್ನಾನ ನಡೆಯಲಿದೆ. ಸೋಮವಾರ ರಥೋತ್ಸವ ಇರಲಿದೆ. ಮಂಗಳವಾರ ರಾತ್ರಿ ತುಂಗಾ ನದಿಯಲ್ಲಿ ತೆಪ್ಪೋತ್ಸವ ನಡೆಯಲಿದೆ. ಇದನ್ನು ಕಣ್ತುಂಬಿಕೊಳ್ಳಲು ದೊಡ್ಡ ಸಂಖ್ಯೆಯ ಜನರು ತೀರ್ಥಹಳ್ಳಿಗೆ ಆಗಮಿಸುತ್ತಾರೆ.

ABOUT ME NEW FINAL FINAL

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 140819 Drone Video Pradeep Tunga River 1 ಶಿವಮೊಗ್ಗದ ತುಂಗಾ ನದಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆ
Next Article 020121 Dollay Dhananjaya in Bhadravathi for Badava Rascal Promotion ಭದ್ರಾವತಿಯಲ್ಲಿ ನಟ ಡಾಲಿ ಧನಂಜಯ, ಮಾಜಿ ಶಾಸಕ ಅಪ್ಪಾಜಿಗೌಡ ಮನೆಗೆ ಭೇಟಿ

ಇದನ್ನೂ ಓದಿ

Thirthahalli-News-Update
THIRTHAHALLI

ತೀರ್ಥಹಳ್ಳಿ: ಚಲಿಸುತ್ತಿದ್ದ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದ ಕಿಯಾ ಕಾರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
ACCIDENT-NEWS-GENERAL-IMAGE.
THIRTHAHALLI

ಆಗುಂಬೆ ಸಮೀಪ ಕಾರುಗಳು ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
power cut mescom ELECTRICITY
THIRTHAHALLI

ಕೋಣಂದೂರಿನ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Thirthahalli-News-Update
THIRTHAHALLI

ತೀರ್ಥಹಳ್ಳಿ ಬಾಲಕ ಸಾವು ಪ್ರಕರಣ, ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಆದೇಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/04/2025
Thirthahalli-News-Update
THIRTHAHALLI

ಕೆಎಫ್‌ಡಿ ಸೋಂಕು, ತೀರ್ಥಹಳ್ಳಿಯ ಬಾಲಕ ಮಣಿಪಾಲದಲ್ಲಿ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/04/2025
THIRTHAHALLI

ತೀರ್ಥಹಳ್ಳಿಯಲ್ಲಿ ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ, ಸವಾರ ಆಸ್ಪತ್ರೆಗೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/04/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?