SHIVAMOGGA LIVE | 31 JULY 2023
THIRTHAHALLI : ಅರ್ಧ ಮಣ್ಣಿನಲ್ಲಿ ಮುಚ್ಚಿ ಹೋಗಿದ್ದ ವಿಜಯನಗರ ಕಾಲದ ದಾನ ಶಾಸನ (Epigraphy)) ಜಮೀನಿನಲ್ಲಿ ಪತ್ತೆಯಾಗಿದೆ. ಚೌಡಿ ಕಲ್ಲು ಎಂದು ಗ್ರಾಮಸ್ಥರು ಇದನ್ನು ಶ್ರದ್ಧೆಯಿಂದ ಪೂಜೆ ಸಲ್ಲಿಸುತ್ತಿದ್ದರು.
ಗುಡ್ಡೇಕೊಪ್ಪ ಗ್ರಾಮದ ಕೃಷಿಕ ವಿಶ್ವನಾಥ ಅವರಿಗೆ ಸೇರಿದ ಜಮೀನಿನಲ್ಲಿ ಈ ದಾನ ಶಾಸನ ಸಿಕ್ಕಿದೆ. 14, 15ನೇ ಶತಮಾನದ ಶಾಸನ ಇದಾಗಿದ್ದು, 47 ಸಾಲುಗಳ ಅಕ್ಷರಗಳನ್ನು ಇಲ್ಲಿ ಕಾಣಬಹುದಾಗಿದೆ. ಯಾವ ರಾಜರ ಕಾಲದ ಶಾಸನ ಎಂಬುದು ಗೊತ್ತಾಗಿಲ್ಲ. ಅಲ್ಲಲ್ಲಿ ಅಕ್ಷರಗಳು ಅಳಿಸಿ ಹೋಗಿವೆ. ಕೆಲವು ಅಕ್ಷರಗಳನ್ನು ಗುರುತಿಸಲಾಗಿದ್ದು ಉಳಿದ್ದದ್ದರ ಕುರಿತು ಸಂಶೋಧನೆ ನಡೆಯಬೇಕಿದೆ. ಪಕ್ಕದಲ್ಲಿಯೇ ವಾಮನಮುದ್ರೆಯು ದೊರೆತಿದೆ.
ಇದನ್ನೂ ಓದಿ – ಕೊಡಚಾದ್ರಿ ಪ್ರವಾಸಿಗರಿಗೆ ಶಾಕ್ ನೀಡಿದ ವನ್ಯಜೀವಿ ವಿಭಾಗ, ಇವತ್ತಿನಿಂದ ಪ್ರವೇಶ ನಿಷೇಧ
ಸಂಶೋಧಕ ಎಲ್.ಎಸ್.ರಾಘವೇಂದ್ರ ಮತ್ತು ಪತ್ರಕರ್ತ ಜಿ.ಆರ್.ಸತ್ಯನಾರಾಯಣ ಶಾಸನದ ವಿವರ ಸಂಗ್ರಹಿಸಿದ್ದಾರೆ. ದಾನ ಶಾಸನ ವಿಚಾರ ತಿಳಿದು ಗ್ರಾಮಸ್ಥರಲ್ಲಿ ಕುತೂಹಲ ಮೂಡಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200