ಶಿವಮೊಗ್ಗ ಲೈವ್.ಕಾಂ | THIRTHAHALLI | 16 ಅಕ್ಟೋಬರ್ 2019

ತೀರ್ಥಹಳ್ಳಿಯಲ್ಲಿ ಶಂಕಿತ ಭಯೋತ್ಪಾದಕರ ಬಂಧನವಾಗಿದೆ ಎಂಬ ವದಂತಿ ಹಬ್ಬಿದೆ. ಇದರಿಂದ ಜನರು ಆತಂಕಕ್ಕೀಡಾಗಿದ್ದಾರೆ. ಆದರೆ ಜಿಲ್ಲಾ ಪೊಲೀಸ್ ಇಲಾಖೆ ಮಾತ್ರ ಉಗ್ರರ ಬಂಧನ ವಿಚಾರವನ್ನು ತಳ್ಳಿಹಾಕಿದೆ.
ಸುರಾನಿ ಎಂಬ ಗ್ರಾಮದಲ್ಲಿ ಶಿವಮೊಗ್ಗ ಪೊಲೀಸರು ಮಂಗಳವಾರ ಭಾರಿ ತಲಾಷ್ ನಡೆಸಿದ್ದಾರೆ. ಇಲ್ಲಿನ ತೋಟದ ಮನೆಯೊಂದರಲ್ಲಿ ಪೊಲೀಸರು ಕೆಲ ಹೊತ್ತು ತಪಾಸಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಭಾಗದಲ್ಲಿ ಬ್ಯಾರಿಕೇಡ್’ಗಳನ್ನು ಹಾಕಲಾಗಿದೆ. ಇಲ್ಲಿ ಓಡಾಡುವ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇದೆ ಕಾರಣಕ್ಕೆ ಶಿವಮೊಗ್ಗದಲ್ಲಿ ಶಂಕಿತ ಭಯೋತ್ಪಾದಕರ ಬಂಧನವಾಗಿದೆ ಎಂದು ವದಂತಿ ಹಬ್ಬಿಸಲಾಗಿದೆ.
ಸುರಾನಿಯಲ್ಲಿ ಪೊಲೀಸರು ತಲಾಷ್ ಮಾಡಿದ್ದೇಕೆ?
ಭಾರತದಲ್ಲಿ ಸ್ಯಾಟಲೈಟ್ ಫೋನ್ ಬಳಕೆಗೆ ನಿಷೇಧವಿದೆ. ಆದರು ತೀರ್ಥಹಳ್ಳಿಯ ಸುರಾನಿ ಭಾಗದಲ್ಲಿ ಕೆಲ ದಿನದ ಹಿಂದೆ ಸ್ಯಾಟಲೈಟ್ ಫೋನ್ ಸಿಗ್ನಲ್ ಬಳಕೆ ಮಾಡಿಕೊಳ್ಳಲಾಗಿದೆ. ಈ ಕುರಿತು ಪೊಲೀಸ್ ಇಲಾಖೆಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಲಭ್ಯವಾಗಿತ್ತು. ಹಾಗಾಗಿ ದಿಢೀರ್ ತಪಾಸಭೆ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿವೆ.
ಶಿವಮೊಗ್ಗ ಎಸ್.ಪಿ. ಏನಂತಾರೆ?
ಇನ್ನು, ಈ ಬೆಳವಣಿಗೆ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು, ಜನರು ಆತಂಕಕ್ಕೀಡಾಗುವ ಅಗತ್ಯವಿಲ್ಲ. ಕೆಲವು ಪೂರ್ವಭಾವಿ ತನಿಖೆಗಾಗಿ ತಪಾಸಣೆ ನಡೆಸಲಾಗಿದೆ. ಉಗ್ರರ ಬಂಧನವಾಗಿದೆ ಅನ್ನುವುದು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಈ ಹಿಂದೆ ಶಂಕಿತ ಭಯೋತ್ಪಾದಕರ ಬಂಧನವಾಗಿತ್ತು. ಈ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ಸುರಾನಿ ಗ್ರಾಮದಲ್ಲಿ ನಡೆದ ಪೊಲೀಸ್ ತಪಾಸಣೆ ವದಂತಿ ಹಬ್ಬಲು ಕಾರಣವಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200