SHIVAMOGGA LIVE NEWS | 20 OCTOBER 2023
THIRTHAHALLI : ಸಾಲ ಬಾಧೆಗೆ ರೈತರೊಬ್ಬರು (Farmer) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಹೊಸಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಂಟೂರುಕಟ್ಟೆ ಸಮೀಪದ ದಂಡಿನಕೊಡಿಗೆ ಗ್ರಾಮದ ನಾರಾಯಣ ಪೂಜಾರಿ (67) ಆತ್ಮಹತ್ಯೆ ಮಾಡಿಕೊಂಡವರು.
![]() |
ಬುಧವಾರ ಬೆಳಗ್ಗೆ ಮನೆಯಲ್ಲಿ ವಿಷ ಸೇವಿಸಿ ನಾರಾಯಣ ಪೂಜಾರಿ ಅಸ್ವಸ್ಥರಾಗಿದ್ದರು. ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ- ಅಡಿಕೆ ಧಾರಣೆ | 19 ಅಕ್ಟೋಬರ್ 2023 | ಎಲ್ಲೆಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200