Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » SOCIAL MEDIA | ಆಗುಂಬೆ ಪೊಲೀಸ್ ಠಾಣೆ ಫೇಸ್​ಬುಕ್​​ ಪೋಸ್ಟ್​​ಗಳು ಸಿಕ್ಕಾಪಟ್ಟೆ ವೈರಲ್, ಕಾರಣವೇನು?

SOCIAL MEDIA | ಆಗುಂಬೆ ಪೊಲೀಸ್ ಠಾಣೆ ಫೇಸ್​ಬುಕ್​​ ಪೋಸ್ಟ್​​ಗಳು ಸಿಕ್ಕಾಪಟ್ಟೆ ವೈರಲ್, ಕಾರಣವೇನು?

13/07/2021 5:14 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 13 ಜುಲೈ 2021

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಅಪರಾಧಿಗಳನ್ನು ಪತ್ತೆ ಹಚ್ಚುವುದು, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದಷ್ಟೆ ಪೊಲೀಸರ ಕರ್ತವ್ಯವಲ್ಲ. ಅಪರಾಧ ತಡೆ ಕುರಿತು ಜಾಗೃತಿ ಮೂಡಿಸುವುದು ಕೂಡ ಇಲಾಖೆ ಜವಾಬ್ದಾರಿಯಾಗಿದೆ. ಇದೆ ಉದ್ದೇಶದಿಂದ ಪೊಲೀಸ್ ಠಾಣೆಯೊಂದರ ಪಿಎಸ್‍ಐ ಒಬ್ಬರು ಆರಂಭಿಸಿದ ಫೇಸ್‍ಬುಕ್‍ ಖಾತೆ, ಈಗ ಠಾಣೆ ವ್ಯಾಪ್ತಿಯಲ್ಲಿ ಭಾರಿ ಮೆಚ್ಚುಗೆ ಗಳಿಸಿದೆ.

ಆಗುಂಬೆ ಪೊಲೀಸ್ ಠಾಣೆ ಹೆಸರಿನ ಫೇಸ್‍ಬುಕ್‍ ಖಾತೆ ಜನ ಮೆಚ್ಚುಗೆ ಗಳಿಸಿದೆ. ಇಲ್ಲಿ ಪ್ರಕಟವಾಗುತ್ತಿರುವ ಮಾಹಿತಿಗಳು ವೈರಲ್ ಆಗುತ್ತಿವೆ. ಹತ್ತಾರು ಕಡೆ ಷೇರ್ ಆಗುತ್ತಿವೆ.

ಫೇಸ್‍ಬುಕ್‍ನಲ್ಲಿ ಏನೇನೆಲ್ಲ ಪ್ರಕಟವಾಗುತ್ತಿದೆ

ಆಗುಂಬೆ ಪೊಲೀಸ್ ಠಾಣೆ ಫೇಸ್‍ಬುಕ್ ಖಾತೆ ಮಾಹಿತಿ ಕಣಜ. ವಂಚಕರ ಜಾಲದ ಕುರಿತು ಜಾಗೃತಿ ಮೂಡಿಸುವ ಫೋಟೊ, ಸಂದೇಶಗಳು ಇಲ್ಲಿವೆ. ಕರೋನ ಕುರಿತು ಮುನ್ನೆಚ್ಚರಿಕೆ ವಹಿಸುವ ಮಾಹಿತಿಗಳಿಗೆ. ರಸ್ತೆ ಸುರಕ್ಷತೆ, ಸಾಮಾಜಿಕ ಜಾಲತಾಣೆದಲ್ಲಿನ ವಂಚನೆಗಳ ಕುರಿತು ಮುನ್ನೆಚ್ಚರಿಕೆ ನೀಡಲಾಗುತ್ತಿದೆ. ಇದಿಷ್ಟೆ ಅಲ್ಲ ಇತ್ತೀಚೆಗೆ ಆರಂಭಿಸಲಾಗಿರುವ ದಿನಕ್ಕೊಂದು ಮಾಹಿತಿಯ ಸರಣಿ ವೈರಲ್ ಆಗಿವೆ. ಹೆಚ್ಚು ಲೈಕ್ಸ್, ಷೇರ್‍ಗಳನ್ನು ಹೊಂದಿದೆ.

ಠಾಣೆ ವ್ಯಾಪ್ತಿಯಲ್ಲಿ ಜಾಗೃತಿ

SOCIAL MEDIA NEWS LOGO 1 1

ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನ ಸಂಪರ್ಕ ಸಭೆಗಳನ್ನು ನಡೆಸಿ, ಕುಂದು ಕೊರತೆ ಆಲಿಸಲಾಗುತ್ತದೆ. ಆದರೆ ಒಮ್ಮೆಲೆ ಅತಿ ಹೆಚ್ಚು ಜನರನ್ನು ತಲುಪುವ ಸಲುವಾಗಿ ಫೇಸ್‍ಬುಕ್‍ ಖಾತೆ ಆರಂಭಿಸಲಾಗಿದೆ.

‘ಜಾಗೃತಿ ಸಭೆಗಳನ್ನು ಮಾಡಿದರೆ ಒಂದು ಕಡೆ ಸುಮಾರು 20 – 30 ಮಂದಿ ಸೇರಬಹುದು. ಆದರೆ ಬಹುತೇಕರು ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಇರುತ್ತಾರೆ. ಇದೆ ಕಾರಣಕ್ಕೆ ಜಾಗೃತಿ ಸಭೆಗಳ ಜೊತೆಗೆ ಫೇಸ್‍ಬುಕ್ ಮೂಲಕವು ಜಾಗೃತಿ ಮೂಡಿಸಲಾಗುತ್ತಿದೆ’ ಅನ್ನುತ್ತಾರೆ ಪಿಎಸ್ಐ ಶಿವಕುಮಾರ್.

ನೆರವಿಗೆ ನಿಲ್ಲುತ್ತಾರೆ, ಭರವಸೆ ಮೂಡಿಸುತ್ತಾರೆ

ಸಾಮಾಜಿಕ ಜಲಾತಾಣ ಹೊರತಾಗಿ ಆಗುಂಬೆ ಠಾಣೆ ಪೊಲೀಸರು ಸ್ಥಳೀಯರ ಸಮಸ್ಯೆಗಳಿಗೆ ಕಿವಿಯಾಗಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗುತ್ತಿರುವ ಅಭ್ಯರ್ಥಿಗಳಿಗೆ ಮಾರ್ಗದರ್ಶನ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ. ತುರ್ತು ಸಂದರ್ಭ ಹಲವರಿಗೆ ನೆರವಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಜನರಿಗೆ ಜಾಗೃತಿ ಮೂಡಿಸುತ್ತಿರುವುದು ಹೊಸ ಪ್ರಯತ್ನವಾಗಿದೆ ಅನ್ನುತ್ತಾರೆ ಸ್ಥಳೀಯರಾದ ನಿತ್ಯಾನಂದ ಆಗುಂಬೆ.

ಆಗುಂಬೆ ಠಾಣೆ ಪೊಲೀಸರ ಈ ಕಾರ್ಯ ಜನ ಮೆಚ್ಚುಗೆ ಪಡೆದಿದೆ. ಅಲ್ಲದೆ ಜನ ಜಾಗೃತರಾಗಲು ಅನುಕೂಲವಾಗಿದೆ.

217389951 1153288501817725 4096501658035425233 n.jpg? nc cat=102&ccb=1 3& nc sid=730e14& nc ohc=NI8ByLd 2YQAX eTTxq&tn=XgSJ3kUX1No5RJvs& nc ht=scontent.fblr1 6

217412964 1153466125133296 488727578606883887 n.jpg? nc cat=107&ccb=1 3& nc sid=8bfeb9& nc ohc=36gkeGQZTRYAX9upBFu& nc ht=scontent.fblr1 3

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 130721 Kudaruru Village No Protest 1 ನೋ ನೆಟ್​​ವರ್ಕ್​, ನೋ ವೋಟಿಂಗ್, ಗ್ರಾಮಸ್ಥರಿಂದ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ಬಹಿಷ್ಕಾರದ ವಾರ್ನಿಂಗ್
Next Article murder graphical image ಬಸ್ ಸ್ಟಾಪ್​ನಲ್ಲಿ ಮಹಿಳೆ ಕೊಲೆ ಕೇಸ್, ಹತ್ತು ತಿಂಗಳಿಂದ ಪರಿಚಯ ಇದ್ದವನಿಂದಲೇ ಕೃತ್ಯ, ಹತ್ಯೆಗೆ ಕಾರಣವೇನು?

ಇದನ್ನೂ ಓದಿ

Thirthahalli-News-Update
THIRTHAHALLI

ತೀರ್ಥಹಳ್ಳಿ: ಚಲಿಸುತ್ತಿದ್ದ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದ ಕಿಯಾ ಕಾರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
ACCIDENT-NEWS-GENERAL-IMAGE.
THIRTHAHALLI

ಆಗುಂಬೆ ಸಮೀಪ ಕಾರುಗಳು ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
power cut mescom ELECTRICITY
THIRTHAHALLI

ಕೋಣಂದೂರಿನ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Thirthahalli-News-Update
THIRTHAHALLI

ತೀರ್ಥಹಳ್ಳಿ ಬಾಲಕ ಸಾವು ಪ್ರಕರಣ, ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಆದೇಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/04/2025
Thirthahalli-News-Update
THIRTHAHALLI

ಕೆಎಫ್‌ಡಿ ಸೋಂಕು, ತೀರ್ಥಹಳ್ಳಿಯ ಬಾಲಕ ಮಣಿಪಾಲದಲ್ಲಿ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/04/2025
THIRTHAHALLI

ತೀರ್ಥಹಳ್ಳಿಯಲ್ಲಿ ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ, ಸವಾರ ಆಸ್ಪತ್ರೆಗೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/04/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?