THIRTHAHALLI | ಆಗುಂಬೆಗೆ ಬರುವ ಪ್ರವಾಸಿಗರ ಗಮನಕ್ಕೆ, ಸ್ವಲ್ಪ ಯಾಮಾರಿದರೂ ಬೀಳುತ್ತೆ ದಂಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 08 FEBRUARY 2021

ಆಗುಂಬೆಯಲ್ಲಿ  ಇನ್ಮುಂದೆ ಪ್ರಾಣಿಗಳಿಗೆ ಆಹಾರ ನೀಡಿದರೆ ದಂಡ ಫಿಕ್ಸ್. ಕಸ ಎಸೆದರೂ ಬೀಳುತ್ತೆ ಫೈನ್. ಘಾಟಿಯ ಉದ್ದಕ್ಕೂ ಅರಣ್ಯ ಇಲಾಖೆ ಕಾರ್ಯಾಚರಣೆ.

ಸೋಮೇಶ್ವರ ಅರಣ್ಯ ವಲಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಪರಿಸರ ಮತ್ತು ಕಾಡು ಪ್ರಾಣಿ, ಪಕ್ಷಿಗಳ ಸಂರಕ್ಷಣೆಗೆ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.

145617723 1324266614601422 1815383270148935737 n.jpg? nc cat=105&ccb=2& nc sid=8bfeb9& nc ohc=giJNk1cbPcgAX bIlHq& nc ht=scontent.fixe1 2

ಬಂದವರೆಲ್ಲ ಆಹಾರ ಕೊಡುತ್ತಿದ್ದರು

ತೀರ್ಥಹಳ್ಳಿ – ಉಡುಪಿ ನಡುವೆ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟಿ, ಪ್ರವಾಸಿಗರ ನೆಚ್ಚಿನ ತಾಣ. ಇಲ್ಲಿ  ಮಂಗಗಳ ಸಂಖ್ಯೆ ಅಧಿಕ. ಬರುವ ಪ್ರವಾಸಿಗರು ತಾವು ತಂದಿರುವ ತಿಂಡಿ, ತಿನಿಸುಗಳನ್ನು ಮಂಗಗಳಿಗೆ ಕೊಡುತ್ತಿದ್ದರು. ಮಕ್ಕಳಂತೂ ಇದನ್ನು ಕಂಡು ಖುಷಿ ಪಡುತ್ತಿದ್ದರು. ಆದರೆ ಇನ್ಮುಂದೆ ಹೀಗೆ ಮಾಡುವಂತಿಲ್ಲ.

ಎಲ್ಲೆಂದರಲ್ಲಿ ಕಸ, ಜಲಪಾತದಲ್ಲಿ ಸ್ನಾನ

ಪ್ರವಾಸಿಗರು ಎಲ್ಲೆಂದರಲ್ಲಿ ಕಸ, ಪ್ಲಾಸ್ಟಿಕ್‍ಗಳನ್ನು ಎಸೆಯುತ್ತಿದ್ದರು. ಇನ್ನು, ರಸ್ತೆ ಪಕ್ಕದ ಸಣ್ಣ ಸಣ್ಣ ಜಲಪಾತಗಳಲ್ಲಿ ಸ್ನಾನ ಮಾಡುವುದು, ವಾಹನಗಳನ್ನು ತೊಳೆಯುತ್ತಿದ್ದರು. ಆಗುಂಬೆಯು ಮೋಜು ಮಸ್ತಿಯ ತಾಣವಾಗಿ ಬದಲಾಗಿತ್ತು. ಇದರಿಂದ ಪರಿಸರ, ಪ್ರಾಣಿ, ಪಕ್ಷಿಗಳಿಗೆ ಹಾನಿ ಉಂಟಾಗುತ್ತಿತ್ತು.  ಅಲ್ಲದೆ ಅಪಘಾತಗಳು ಸಂಭವಿಸುತ್ತಿದ್ದವು. ಇದೆಲ್ಲಕ್ಕೂ ಬ್ರೇಕ್ ಹಾಕಲು ಅರಣ್ಯ ಇಲಾಖೆ ನಿರ್ಧರಿಸಿದೆ.

40 ಸಿಬ್ಬಂದಿಗಳಿಂದ ಕಾರ್ಯಾಚರಣೆ

ಆಗುಂಬೆ ಘಾಟಿಯಲ್ಲಿ ಸೋಮೇಶ್ವರದವರೆಗೆ ಅರಣ್ಯ ಇಲಾಖೆಯ 40 ಸಿಬ್ಬಂದಿ ಕಾರ್ಯಾಚರಣೆ ನಡೆಸಿ ದಂಡ ವಿಧಿಸುತ್ತಿದ್ದಾರೆ. ಪ್ರಾಣಿಗಳಿಗೆ ಆಹಾರ ನೀಡುವುದು, ಕಸ ಎಸೆಯುವುದು, ಜಲಪಾತಗಳಲ್ಲಿ ಸ್ನಾನ, ವಾಹನ ತೊಳೆಯುವವರಿಗೆ ಫೈನ್ ಹಾಕುತ್ತಿದ್ದಾರೆ.

ಫೈನ್ ಹಾಕಲು ಕಾರಣವೇನು?

ಜಂಕ್ ಫುಡ್‍ಗಳಿಂದ ವನ್ಯಜೀವಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ. ಅಲ್ಲದೆ, ರೊಚ್ಚಿಗೆದ್ದು ಆಹಾರಕ್ಕಾಗಿ ಪ್ರವಾಸಿಗರ ಮೇಲೆ, ಸಮೀಪದ ಊರುಗಳಲ್ಲಿ ಜನರ ಮೇಲೆ ದಾಳಿ ನಡೆಸುತ್ತಿವೆ. ಇದನ್ನು ತಡೆಯುವ ಸಲುವಾಗಿ ಈ ಕ್ರಮ ಕೈಗೊಂಡಿದ್ದಾರೆ. ಕಸ ಎಸೆಯುವುದು ಪರಿಸರಕ್ಕೆ ಹಾನಿ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗುತ್ತಿದೆ.

147073609 1324266637934753 9207865472087055726 n.jpg? nc cat=109&ccb=2& nc sid=8bfeb9& nc ohc=GzzHkJNOZqcAX ysvVg& nc ht=scontent.fixe1 1

ಯಾವುದಕ್ಕೆ ಎಷ್ಟೆಷ್ಟು ದಂಡ?

ಕಾಡು ಪ್ರಾಣಿಗಳಿಗೆ ಆಹಾರ ನೀಡುವುದು, ಕಸ ಎಸೆಯುವುದು ಅಪರಾಧ ಎಂದು ಬೋರ್ಡುಗಳನ್ನು ಹಾಕಲಾಗಿದೆ.

ಒಂದು ವೇಳೆ ಕಾಡು ಪ್ರಾಣಿಗಳಿಗೆ ತಿನಿಸು ನೀಡುವುದು ಕಂಡುಬಂದರೆ 50 ರೂ. ದಂಡ

ರಸ್ತೆ ಬದಿಯಲ್ಲಿ ಕಸ, ಪ್ಲಾಸ್ಟಿಕ್ ಎಸೆದರೆ 100 ರೂ. ದಂಡ

ಅನುಮತಿ ಇಲ್ಲದೆ ಅರಣ್ಯ ಪ್ರವೇಶ. ರಸ್ತೆ ಬದಿಯ ಜಲಪಾತಗಳಲ್ಲಿ ಸ್ನಾನ, ವಾಹನ ತೊಳೆಯುವುದು, ರಾಷ್ಟ್ರೀಯ ಉದ್ಯಾನದಲ್ಲಿ ಸಕಾರಣವಿಲ್ಲದೆ ನಿಗದಿಪಡಿಸಿದ್ದಕ್ಕಿಂತಲೂ ಹೆಚ್ಚಿನ ಸಮಯ ಉಳಿದರೆ ತಲಾ 200 ರೂ. ದಂಡ.

ಆಗುಂಬೆಯಲ್ಲಿ ದಂಡ ವಿಧಿಸುವ ಕಾರ್ಯಾಚರಣೆ ಶುರುವಾಗಿದೆ. ವನ್ಯಜೀವಿಗಳ ಆರೋಗ್ಯ, ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮ ತಪ್ಪಿಸುವ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಜಿಲ್ಲೆಯ ಉಳಿದ ಪ್ರವಾಸಿ ತಾಣಗಳಲ್ಲೂ ಇದೆ ಕ್ರಮ ಕೈಗೊಳ್ಳುವಂತೆ ಜನರ ಒತ್ತಾಯವಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 8, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment