ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ : ಮೇಲಿನಕುರುವಳ್ಳಿಯ ವಾಗ್ದೇವಿ ಪದವಿ ಪೂರ್ವ ಕಾಲೇಜಿನಲ್ಲಿ ದೀಕ್ಷಾ.ಆರ್ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 600ಕ್ಕೆ 599 ಅಂಕ ಗಳಿಸಿ ಪ್ರಥಮ ರ್ಯಾಂಕ್ (RANK) ಪಡೆದಿದ್ದಾರೆ.
ಇನ್ನು, ಪ್ರಥಮ ಸ್ಥಾನ (RANK) ಪಡೆದಿರುವ ಕುರಿತು ದೀಕ್ಷಾ.ಆರ್ ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದರು.
ದೀಕ್ಷಾ ಜೊತೆಗೆ ಕಿರು ಸಂದರ್ಶನ
![]()
» ಅಭ್ಯಾಸ ಹೇಗಿತ್ತು?
ನಾನು ಪ್ರತಿದಿನ ಓದುತ್ತಿದ್ದೆ. ಕಾಲೇಜಿನಲ್ಲಿ ಉಪನ್ಯಾಸಕರು ಚೆನ್ನಾಗಿ ಕಲಿಸುತ್ತಿದ್ದರು. ಯಾವುದೇ ಡೌಟುಗಳಿದ್ದರು ತಿಳಿಸಿ ಕೊಡುತ್ತಿದ್ದರು. ಅಲ್ಲದೆ ಯು ಟ್ಯೂಬ್ನಲ್ಲಿಯು ವಿಷಯಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ನೋಡುತ್ತಿದ್ದೆ. ಆದ್ದರಿಂದ ವಿಷಯಗಳು ಹೆಚ್ಚು ಮನದಟ್ಟಾದವು. ಇದು ಪರೀಕ್ಷೆಯಲ್ಲಿ ಅನುಕೂಲವಾಯಿತು.

» ಪೋಷಕರು ಹೇಗೆ ನೆರವಾದರು?
ಪೋಷಕರು ಇಬ್ಬರು ಶಿಕ್ಷಕರು. ಅಪ್ಪ ರಾಘವೇಂದ್ರ ಕಲ್ಕೂರು. ಮೇಗರವಳ್ಳಿ ಶಾಲೆಯಲ್ಲಿ ಶಿಕ್ಷಕ. ತಾಯಿ ಉಷಾ.ವಿ. ತೀರ್ಥಹಳ್ಳಿಯ ಬಾಲಕಿಯ ಪ್ರೌಢಶಾಲೆಯಲ್ಲಿ ಶಿಕ್ಷಕರು. ನನ್ನ ಓದಿಗೆ ಕೊರತೆ ಆಗದಂತೆ ನೋಡಿಕೊಂಡರು. ಅಲ್ಲದೆ ನನ್ನ ಓದಿನ ವಿಚಾರದಲ್ಲಿ ಯಾವುದೇ ಗೊಂದಲ ಉಂಟಾದರು ಅದನ್ನ ಪರಿಹರಿಸುತ್ತಿದ್ದರು.
» ನಿಮ್ಮ ಗುರಿ ಏನು?
ಮುಂದೆ ಇಂಜಿನಿಯರ್ ಆಗಬೇಕು ಎಂಬ ಹಂಬಲವಿದೆ. ಅದರತ್ತ ಗಮನ ಹರಿಸುತ್ತೇನೆ.

ಇದನ್ನೂ ಓದಿ » ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ, ಶಿವಮೊಗ್ಗ ಜಿಲ್ಲೆಗೆ ಎಷ್ಟನೆ ಸ್ಥಾನ? ಇಲ್ಲಿದೆ ರಿಸಲ್ಟ್ ಹೈಲೈಟ್ಸ್

LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು





