SHIVAMOGGA LIVE NEWS | 29 MAY 2024
THIRTHAHALLI : ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೆ ಅರಣ್ಯ ರಕ್ಷಕ (GUARD) ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ವಲಯ ಅರಣ್ಯ ವಿಭಾಗದಲ್ಲಿ ಅರಣ್ಯ ರಕ್ಷಕರಾಗಿ ಕಾರ್ಯನಿವಹಿಸುತ್ತಿದ್ದ ಬಸವರಾಜ್ (34) ಮೃತರು. ಬೆಜ್ಜವಳ್ಳಿಯ ಬಾಡಿಗೆ ಮನೆಯಲ್ಲಿ ಅವರು ವಾಸವಾಗಿದ್ದರು.
ಸೋಮವಾರ ರಾತ್ರಿ ಬಸವರಾಜ್ ಅವರು ಮನೆಗೆ ಬಂದಾಗ ಎಲ್ಲರು ನೋಡಿದ್ದರು. ಬೆಳಗ್ಗೆ ಬಹು ಹೊತ್ತು ಹೊರಗೆ ಬಾರದಿದ್ದರಿಂದ ಸ್ಥಳೀಯರು ಅನುಮಾನಗೊಂಡಿದ್ದಾರೆ. ಬಾಗಿಲು ತೆಗೆದಾಗ ಬಸವರಾಜ್ ಮಲಗಿದ್ದಲ್ಲೆ ಮೃತಪಟ್ಟಿದ್ದರು. ಮಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಡಿಮೆಯಾದ ಮಳೆ, ಹೆಚ್ಚಿದ ತಾಪಮಾನ, ಇವತ್ತು ಎಷ್ಟಿದೆ ಉಷ್ಣಾಂಶ?
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಸವರಾಜ್, 2018ರಲ್ಲಿ ಅರಣ್ಯ ಇಲಾಖೆ ಕರ್ತವ್ಯಕ್ಕೆ ಸೇರಿದ್ದರು. 3 ವರ್ಷದ ಹಿಂದೆ ತೀರ್ಥಹಳ್ಳಿ ವಲಯಾರಣ್ಯ ವಿಭಾಗಕ್ಕೆ ಬಂದಿದ್ದು, ಬೆಜ್ಜವಳ್ಳಿ, ಮಹಿಷಿ, ದಬ್ಬಣಗದ್ದೆ, ಕುಡುಮಲ್ಲಿಗೆ, ಜನಗಲ್ ಗ್ರಾಮಗಳ ವ್ಯಾಪ್ತಿಯ ಅರಣ್ಯ ರಕ್ಷಕರಾಗಿದ್ದರು. ಬಸವರಾಜ್ ಪತ್ನಿ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200