
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 15 ಆಗಸ್ಟ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ತೀರ್ಥಹಳ್ಳಿಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಯುವಕರ ತಂಡದ ಮೇಲೆ ಪೊಲೀಸರು ದಾಳಿ ಮಾಡಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಒಂದು ಕೆಜಿ 115 ಗ್ರಾಮ್ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ಯಾರು? ಎಲ್ಲಿಯವರು?
ಬಂಧಿತ ಆರೋಪಿಗಳೆಲ್ಲ ಭದ್ರಾವತಿಯವರು ಎಂದು ತಿಳಿದು ಬಂದಿದೆ. ಭದ್ರಾವತಿಯ ಎನ್ಎಂಸಿಯ ಅರುಣ್ (26), ಪೇಪರ್ ಟೌನ್ನ ರಂಜಿತ್ (23), ಭೋವಿ ಕಾಲೋನಿಯ ಕಿರಣ್ (23), ಪ್ರದೀಪ್ (24) ಬಂಧಿತರು.
ಕಾರಲ್ಲಿ ಬಂದು ಗಾಂಜಾ ಮಾರಾಟ
ಈ ಯುವಕರು ಭದ್ರಾವತಿಯಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇವರಿಂದ 20 ಸಾವಿರ ಮೌಲ್ಯದ 1 ಕೆಜಿ 115 ಗ್ರಾಂ ಗಾಂಜಾ, ಒಂದು ಕಾರು, ಐದು ಮೊಬೈಲ್ ಫೋನ್, 6,600 ರೂ. ನಗದು ವಶಕ್ಕೆ ಪಡೆಯಲಾಗಿದೆ.
ತೀರ್ಥಹಳ್ಳಿ ಡಿವೈಎಸ್ಪಿ ಡಾ. ಸಂತೋಷ್, ಸಿಪಿಐ ಪ್ರವೀಣ್ ಜಿ ನೀಲಮ್ಮನವರ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





