ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 2 ಫೆಬ್ರವರಿ 2022
ಕೋಟ್ಯಂತರ ರುಪಾಯಿ ರಾಜಧನ ಬಿಡುಗಡೆ ಮಾಡದ ಹಿನ್ನೆಲೆ ಗ್ರಾಮ ಪಂಚಾಯಿತಿ ಸದಸ್ಯರೆ ಮರಳು ಕ್ವಾರಿಗಳಿಗೆ ಬೀಗ ಜಡಿದಿದ್ದಾರೆ. ಈ ಮೂಲಕ ಸರ್ಕಾರದ ನಡೆ ವಿರುದ್ಧ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
ತೀರ್ಥಹಳ್ಳಿ ತಾಲೂಕು ನಾಲೂರು ಕೋಳಿಗೆ ಗ್ರಾಮ ಪಂಚಾಯಿತಿಗೆ ಕಳೆದ ಮೂರು ವರ್ಷದಿಂದ ರಾಜಧನ ಬಿಡುಗಡೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸದಸ್ಯರೆಲ್ಲ ಒಗ್ಗೂಡಿ ಮರಳು ಕ್ವಾರಿಗೆ ಬೀಗ ಹಾಕಿದ್ದಾರೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮರಳು ಕ್ವಾರಿಗೆ ಭೇಟಿ ನೀಡಿದ ಗ್ರಾಮ ಪಂಚಾಯಿತಿ ಸದಸ್ಯರು, ರಾಜಧನಕ್ಕೆ ಆಗ್ರಹಿಸಿದರು. ರಾಜಧನ ಬಿಡುಗಡೆಯಾದ ಬಳಿಕ ಮರಳು ತೆಗೆಯುವಂತೆ ಪಟ್ಟು ಹಿಡಿದಿದ್ದಾರೆ.
ನಾಲೂರು ಕೋಳಿಗೆ ಗ್ರಾಮ ಪಂಚಾಯಿತಿಗೆ ಕಳೆದ ಮೂರು ವರ್ಷದಿಂದ ರಾಜಧನ ಬಿಡುಗಡೆಯಾಗಿಲ್ಲ. ಈ ಕುರಿತು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮನವರಿಕೆ ಮಾಡಲಾಗಿದೆ. ಸಚಿವರಿಗೂ ಮನವಿ ಮಾಡಲಾಗಿದೆ. ಆದರೂ ಸರ್ಕಾರ ರಾಜಧನ ಬಿಡುಗಡೆ ಮಾಡಿಲ್ಲ. ನಾಲೂರು ಕೋಳಿಗೆ 2.48 ಕೋಟಿ ರೂ. ರಾಜಧನ ಬಾಕಿ ಇದೆ.
ಅರೇಹಳ್ಳಿಯಲ್ಲೂ ಕ್ವಾರಿಗೆ ಬೀಗ
ಮೂರು ವರ್ಷದಿಂದ ರಾಜಧನ ಬಿಡುಗಡೆಯಾಗದ ಹಿನ್ನೆಲೆ ಅರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಮರಳು ಕ್ವಾರಿಗೆ ಬೀಗ ಹಾಕಲಾಗಿದೆ. ರಾಜಧನ ಬಿಡುಗಡೆಯಾದ ಬಳಿಕ ಮರಳು ತೆಗೆಯುವಂತೆ ಗ್ರಾಮ ಪಂಚಾಯಿತಿ ಸದಸ್ಯರು ಆಗ್ರಹಿಸಿದ್ದಾರೆ.
ಅರೇಹಳ್ಳಿ ಗ್ರಾಮ ಪಂಚಾಯಿತಿಗೆ 1.45 ಕೋಟಿ ರೂ. ರಾಜಧನ ಬಾಕಿ ಇದೆ. ಇದನ್ನು ಸರ್ಕಾರ ಬಿಡುಗಡೆ ಮಾಡಿದರೆ ಮಾತ್ರ ಮರಳು ತೆಗೆಯಲು ಅವಕಾಶ ನೀಡುವುದಾಗಿ ಗ್ರಾಮ ಪಂಚಾಯಿತಿ ಸದಸ್ಯರು ಪಟ್ಟು ಹಿಡಿದಿದ್ದಾರೆ.

Grama Panchayaths in Shimoga | About Shivamogga Live
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















