ಕೋಟಿ ಕೋಟಿ ರಾಜಧನ ಬಾಕಿ, ಮರಳು ಕ್ವಾರಿಗಳಿಗೆ ಬೀಗ ಜಡಿದ ಗ್ರಾಮ ಪಂಚಾಯಿತಿ ಸದಸ್ಯರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 2 ಫೆಬ್ರವರಿ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೋಟ್ಯಂತರ ರುಪಾಯಿ ರಾಜಧನ ಬಿಡುಗಡೆ ಮಾಡದ ಹಿನ್ನೆಲೆ ಗ್ರಾಮ ಪಂಚಾಯಿತಿ ಸದಸ್ಯರೆ ಮರಳು ಕ್ವಾರಿಗಳಿಗೆ ಬೀಗ ಜಡಿದಿದ್ದಾರೆ. ಈ ಮೂಲಕ ಸರ್ಕಾರದ ನಡೆ ವಿರುದ್ಧ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.

Nanjappa Hospital covid care

ತೀರ್ಥಹಳ್ಳಿ ತಾಲೂಕು ನಾಲೂರು ಕೋಳಿಗೆ ಗ್ರಾಮ ಪಂಚಾಯಿತಿಗೆ ಕಳೆದ ಮೂರು ವರ್ಷದಿಂದ ರಾಜಧನ ಬಿಡುಗಡೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸದಸ್ಯರೆಲ್ಲ ಒಗ್ಗೂಡಿ ಮರಳು ಕ್ವಾರಿಗೆ ಬೀಗ ಹಾಕಿದ್ದಾರೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮರಳು ಕ್ವಾರಿಗೆ ಭೇಟಿ ನೀಡಿದ ಗ್ರಾಮ ಪಂಚಾಯಿತಿ ಸದಸ್ಯರು, ರಾಜಧನಕ್ಕೆ ಆಗ್ರಹಿಸಿದರು. ರಾಜಧನ ಬಿಡುಗಡೆಯಾದ ಬಳಿಕ ಮರಳು ತೆಗೆಯುವಂತೆ ಪಟ್ಟು ಹಿಡಿದಿದ್ದಾರೆ.

ನಾಲೂರು ಕೋಳಿಗೆ ಗ್ರಾಮ ಪಂಚಾಯಿತಿಗೆ ಕಳೆದ ಮೂರು ವರ್ಷದಿಂದ ರಾಜಧನ ಬಿಡುಗಡೆಯಾಗಿಲ್ಲ. ಈ ಕುರಿತು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮನವರಿಕೆ ಮಾಡಲಾಗಿದೆ. ಸಚಿವರಿಗೂ ಮನವಿ ಮಾಡಲಾಗಿದೆ. ಆದರೂ ಸರ್ಕಾರ ರಾಜಧನ ಬಿಡುಗಡೆ ಮಾಡಿಲ್ಲ. ನಾಲೂರು ಕೋಳಿಗೆ 2.48 ಕೋಟಿ ರೂ. ರಾಜಧನ ಬಾಕಿ ಇದೆ.

ಅರೇಹಳ್ಳಿಯಲ್ಲೂ ಕ್ವಾರಿಗೆ ಬೀಗ

ಮೂರು ವರ್ಷದಿಂದ ರಾಜಧನ ಬಿಡುಗಡೆಯಾಗದ ಹಿನ್ನೆಲೆ ಅರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಮರಳು ಕ್ವಾರಿಗೆ ಬೀಗ ಹಾಕಲಾಗಿದೆ. ರಾಜಧನ ಬಿಡುಗಡೆಯಾದ ಬಳಿಕ ಮರಳು ತೆಗೆಯುವಂತೆ ಗ್ರಾಮ ಪಂಚಾಯಿತಿ ಸದಸ್ಯರು ಆಗ್ರಹಿಸಿದ್ದಾರೆ.

sand mining gate locked

ಅರೇಹಳ್ಳಿ ಗ್ರಾಮ ಪಂಚಾಯಿತಿಗೆ 1.45 ಕೋಟಿ ರೂ. ರಾಜಧನ ಬಾಕಿ ಇದೆ. ಇದನ್ನು ಸರ್ಕಾರ ಬಿಡುಗಡೆ ಮಾಡಿದರೆ ಮಾತ್ರ ಮರಳು ತೆಗೆಯಲು ಅವಕಾಶ ನೀಡುವುದಾಗಿ ಗ್ರಾಮ ಪಂಚಾಯಿತಿ ಸದಸ್ಯರು ಪಟ್ಟು ಹಿಡಿದಿದ್ದಾರೆ.

about smg live readers

Grama Panchayaths in ShimogaAbout Shivamogga Live

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment