ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 2 ಫೆಬ್ರವರಿ 2022
ಕೋಟ್ಯಂತರ ರುಪಾಯಿ ರಾಜಧನ ಬಿಡುಗಡೆ ಮಾಡದ ಹಿನ್ನೆಲೆ ಗ್ರಾಮ ಪಂಚಾಯಿತಿ ಸದಸ್ಯರೆ ಮರಳು ಕ್ವಾರಿಗಳಿಗೆ ಬೀಗ ಜಡಿದಿದ್ದಾರೆ. ಈ ಮೂಲಕ ಸರ್ಕಾರದ ನಡೆ ವಿರುದ್ಧ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
ತೀರ್ಥಹಳ್ಳಿ ತಾಲೂಕು ನಾಲೂರು ಕೋಳಿಗೆ ಗ್ರಾಮ ಪಂಚಾಯಿತಿಗೆ ಕಳೆದ ಮೂರು ವರ್ಷದಿಂದ ರಾಜಧನ ಬಿಡುಗಡೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸದಸ್ಯರೆಲ್ಲ ಒಗ್ಗೂಡಿ ಮರಳು ಕ್ವಾರಿಗೆ ಬೀಗ ಹಾಕಿದ್ದಾರೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮರಳು ಕ್ವಾರಿಗೆ ಭೇಟಿ ನೀಡಿದ ಗ್ರಾಮ ಪಂಚಾಯಿತಿ ಸದಸ್ಯರು, ರಾಜಧನಕ್ಕೆ ಆಗ್ರಹಿಸಿದರು. ರಾಜಧನ ಬಿಡುಗಡೆಯಾದ ಬಳಿಕ ಮರಳು ತೆಗೆಯುವಂತೆ ಪಟ್ಟು ಹಿಡಿದಿದ್ದಾರೆ.
ನಾಲೂರು ಕೋಳಿಗೆ ಗ್ರಾಮ ಪಂಚಾಯಿತಿಗೆ ಕಳೆದ ಮೂರು ವರ್ಷದಿಂದ ರಾಜಧನ ಬಿಡುಗಡೆಯಾಗಿಲ್ಲ. ಈ ಕುರಿತು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮನವರಿಕೆ ಮಾಡಲಾಗಿದೆ. ಸಚಿವರಿಗೂ ಮನವಿ ಮಾಡಲಾಗಿದೆ. ಆದರೂ ಸರ್ಕಾರ ರಾಜಧನ ಬಿಡುಗಡೆ ಮಾಡಿಲ್ಲ. ನಾಲೂರು ಕೋಳಿಗೆ 2.48 ಕೋಟಿ ರೂ. ರಾಜಧನ ಬಾಕಿ ಇದೆ.
ಅರೇಹಳ್ಳಿಯಲ್ಲೂ ಕ್ವಾರಿಗೆ ಬೀಗ
ಮೂರು ವರ್ಷದಿಂದ ರಾಜಧನ ಬಿಡುಗಡೆಯಾಗದ ಹಿನ್ನೆಲೆ ಅರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಮರಳು ಕ್ವಾರಿಗೆ ಬೀಗ ಹಾಕಲಾಗಿದೆ. ರಾಜಧನ ಬಿಡುಗಡೆಯಾದ ಬಳಿಕ ಮರಳು ತೆಗೆಯುವಂತೆ ಗ್ರಾಮ ಪಂಚಾಯಿತಿ ಸದಸ್ಯರು ಆಗ್ರಹಿಸಿದ್ದಾರೆ.
ಅರೇಹಳ್ಳಿ ಗ್ರಾಮ ಪಂಚಾಯಿತಿಗೆ 1.45 ಕೋಟಿ ರೂ. ರಾಜಧನ ಬಾಕಿ ಇದೆ. ಇದನ್ನು ಸರ್ಕಾರ ಬಿಡುಗಡೆ ಮಾಡಿದರೆ ಮಾತ್ರ ಮರಳು ತೆಗೆಯಲು ಅವಕಾಶ ನೀಡುವುದಾಗಿ ಗ್ರಾಮ ಪಂಚಾಯಿತಿ ಸದಸ್ಯರು ಪಟ್ಟು ಹಿಡಿದಿದ್ದಾರೆ.
Grama Panchayaths in Shimoga | About Shivamogga Live
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200