ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಹಣಗೆರೆಕಟ್ಟೆಯ (Hanagerekatte) ಭೂತರಾಯ ಚೌಡೇಶ್ವರಿ ದೇವಾಲಯಕ್ಕೆ ಭಕ್ತರು ಅರ್ಪಿಸಿದ್ದ ಕಾಣಿಕೆ ಹಣದ ಎಣಿಕೆ ಕಾರ್ಯ ನಡೆಯಿತು. ಹುಂಡಿಯಲ್ಲಿ ಒಟ್ಟು ₹62,42,145 ಕಾಣಿಕೆ ಸಂಗ್ರಹವಾಗಿತ್ತು. ಇದರಲ್ಲಿ ₹2,45,695 ಚಿಲ್ಲರೆ ನಾಣ್ಯಗಳು ಸೇರಿವೆ.

ಕಳೆದ ಆಗಸ್ಟ್ ತಿಂಗಳಿನಲ್ಲಿ ನಡೆದ ಎಣಿಕೆಯ ಸಂದರ್ಭದಲ್ಲಿ 71.95 ಲಕ್ಷ ರೂಪಾಯಿ ಹಣ ಸಂಗ್ರಹಗೊಂಡಿತ್ತು. ಹುಂಡಿ ಎಣಿಕೆ ಕಾರ್ಯವು ತಹಸೀಲ್ದಾರ್ ಎಸ್. ರಂಜಿತ್ ಮತ್ತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರೇಣುಕಾ ಹೊಸಮನಿ ಅವರ ಸಮ್ಮುಖದಲ್ಲಿ ನಡೆಯಿತು.
ಇದನ್ನೂ ಓದಿ » ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಬಸ್, ಬೈಕ್ ಡಿಕ್ಕಿ, ಸಿರಿಗೆರೆಯ ಇಬ್ಬರಿಗೆ ಗಾಯ
ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯೆ ಬಿ. ವರಲಕ್ಷ್ಮಿ ಪ್ರಕಾಶ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಮಪ್ಪ, ವಿವಿಧ ಸಮಿತಿ ಸದಸ್ಯರು, ಧಾರ್ಮಿಕ ದತ್ತಿ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಮಾಳೂರು ಪೊಲೀಸ್ ಠಾಣೆಯ ಸಿಬ್ಬಂದಿ ಎಣಿಕೆ ಕಾರ್ಯಕ್ಕೆ ಭದ್ರತೆ ಒದಗಿಸಿದ್ದರು.
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





