THIRTHAHALLI, 30 JULY 2024 : ತೀರ್ಥಹಳ್ಳಿ ತಾಲೂಕಿನಾದ್ಯಂತ ಇವತ್ತು ಮಳೆ ಅಬ್ಬರಿಸುತ್ತಿದೆ (Heavy Rain). ತುಂಗಾ ನದಿ ನೀರಿನ ಮಟ್ಟ ಹೆಚ್ಚಳವಾಗಿದೆ. ಇನ್ನೊಂದೆಡೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜಗಳಿಗೆ ರಜೆ ಘೋಷಿಸಲಾಗಿದೆ.
ತಾಲೂಕಿನಾದ್ಯಂತ ಮಳೆ ಅಬ್ಬರ
ತೀರ್ಥಹಳ್ಳಿ ತಾಲೂಕಿನಲ್ಲಿ ಮಳೆ ಬಿರುಸಾಗಿದೆ. ಬೆಳಗ್ಗೆಯಿಂದ ಎಡೆಬಿಡದೆ ಮಳೆಯಾಗುತ್ತಿದೆ. ಸದ್ಯ ಹೊನ್ನೇತಾಳು, ಬಿದರಗೋಡು ಸೇರಿದಂತೆ ಆಗುಂಬೆ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ತೂದರು, ಭಾಂಡ್ಯ ಕುಕ್ಕೆ, ತ್ರಯಂಬಕಪುರ, ದೇಮ್ಲಾಪುರ, ಆರಗ, ಹೆಗ್ಗೋಡು ಸೇರಿದಂತೆ ವಿವಿಧೆಡೆ ಜೋರು ಮಳೆಯಾಗುತ್ತಿರುವ ವರದಿಯಾಗಿದೆ.
![]() |
ರಾಮ ಮಂಟಪದ ಮೇಲೆ ನೀರು
ಶೃಂಗೇರಿ, ತೀರ್ಥಹಳ್ಳಿಯಲ್ಲಿ ಭಾರಿ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರಸಿದ್ಧ ರಾಮ ಮಂಟಪ ಮುಳುಗಿದೆ. ಮಂಟಪದ ಮೇಲೆ ಎರಡ್ಮೂರು ಅಡಿಗಿಂತಲೂ ಹೆಚ್ಚು ನೀರು ಹರಿಯುತ್ತಿದೆ ಎನ್ನಲಾಗುತ್ತಿದೆ.
ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ತುಂಗಾ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ತಾಲೂಕಿನಾದ್ಯಂತ ನದಿ ಪಾತ್ರದ ಜನರಲ್ಲಿ ಭಯ ಆವರಿಸಿದೆ. ತಗ್ಗು ಪ್ರದೇಶದ ನಿವಾಸಿಗಳಲ್ಲಿಯು ಆತಂಕ ಮೂಡಿದೆ. ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಜು.31ರಂದು ತೀರ್ಥಹಳ್ಳಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಆದೇಶಿಸಿದ್ದಾರೆ.
ಇದನ್ನೂ ಓದಿ ⇓
ತುಂಗಾ, ಭದ್ರಾ ಜಲಾಶಯಗಳ ಒಳ, ಹೊರ ಹರಿವು ಏರಿಕೆ, ನದಿ ಪಾತ್ರದಲ್ಲಿ ಜನರಲ್ಲಿ ಭೀತಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200