ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಮಳೆ ವರದಿ: ಜಿಲ್ಲೆಯಲ್ಲಿ ಮೂರು ತಾಲೂಕುಗಳಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆಯಾಗುತ್ತಿದೆ (Heavy Rainfall). ಹೊಸನಗರ, ಸಾಗರ ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದೆ. ತೀರ್ಥಹಳ್ಳಿಯಲ್ಲಿ ಜೋರು ಮಳೆಯಾಗುತ್ತಿದೆ.
ಸಾಗರ ತಾಲೂಕಿನ ಕಾಂಡಿಕೆ, ಕಲ್ಮನೆ, ಕೋಳೂರು, ಭೀಮನಕೋಣೆ, ಭೀಮನೇರಿ, ಮಾಲ್ವೆ, ಕೆಳದಿ ಭಾಗದಲ್ಲಿ ವಿಪರೀತ ಮಳೆಯಾಗುತ್ತಿದೆ. ಇತ್ತ ಹೊಸನಗರ ತಾಲೂಕಿನ ಮಾರುತಿಪುರ, ಕೋಡೂರು, ಮುಂಬಾರು, ಮೇಲಿನಬೆಸಿಗೆ, ಹೊಸೂರು ಸಂಪೆಕಟ್ಟೆ ಭಾಗದಲ್ಲಿಯು ಭಾರಿ ಸುರಿಯುತ್ತಿದೆ.
ತೀರ್ಥಹಳ್ಳಿ ತಾಲೂಕಿನ ದೇಮ್ಲಾಪುರ, ಆರಗ, ನೆರಟೂರು, ಹೊಸಹಳ್ಳಿ, ಅರೆಹಳ್ಳಿ, ಹೊನ್ನೇತಾಳು, ಬಿದರಗೋಡು, ಆಗುಂಬೆ ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಭಾಂಡ್ಯ ಕುಕ್ಕೆ, ತ್ರಯಂಬಕಪುರ, ತೂದೂರು ಭಾಗದಲ್ಲಿ ಸಾಧಾರಣದಿಂದ ಜೋರು ಮಳೆಯಾಗುತ್ತಿದೆ.
ಶಾಲೆ, ಕಾಲೇಜುಗಳಿಗೆ ರಜೆ
ಭಾರಿ ಮತ್ತು ನಿರಂತರ ಮಳೆ, ಜೋರು ಗಾಳಿಯ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರ್ಗಳು ಆದೇಶಿಸಿದ್ದಾರೆ. ಇನ್ನೊಂದೆಡೆ ಹೊನ್ನೇತಾಳು ಸರ್ಕಾರಿ ಪ್ರಾಥಮಿಕ ಶಾಲೆಗೆ ಎಸ್ಡಿಎಂಸಿಯೇ ರಜೆ ಘೋಷಿಸಿದೆ.
ಇದನ್ನೂ ಓದಿ » ಜೋರು ಮಳೆ, ಇವತ್ತು ಎರಡು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು






